ಸುಲ್ಕೇರಿ : ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ 2026-2027ನೇ ಸಾಲಿನ ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷರಾಗಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ ವಹಿಸಿಕೊಂಡಿದ್ದರು. ಸಭಾ ವೇದಿಕೆಯಲ್ಲಿ ಬೆಂಗಳೂರು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಹಾಗೂ ಮಲೆನಾಡು ಕ್ಯಾಶ್ಯೂಸ್ ಇಂಡಸ್ಟ್ರೀಸ್ ಇದರ ಮಾಲಕ ಹಾಲಾಡಿ ನಾಗರಾಜ ಶೆಟ್ಟಿ, ವಸಂತ ಭಟ್ ಉದ್ಯಮಿಗಳು ನಾರಾವಿ, ಹೊಸದಿಗಂತ ದಿನಪತ್ರಿಕೆಯ ಮಾಜಿ ಸಂಪಾದಕ ಹಾಗೂ ವ್ಯಾಪಾರಸ್ಥರು ಮಂಗಳೂರು ಅರವಿಂದ ಬಿಜೂರು, ನಾರಾವಿ ಸಂತ ಪಾವ್ಲರ ಆಂಗ್ಲ ಮಾಧ್ಯಮ ಶಾಲೆ ಸಹ ಶಿಕ್ಷಕಿ ಶಕುಂತಲಾ ಶೆಟ್ಟಿ, ಸುಲ್ಕೇರಿ ಶಾಲಾ ಆಡಳಿತ ಮಂಡಳಿ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಸುಲ್ಕೇರಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜು ಪೂಜಾರಿ ಉಪಸ್ಥಿತರಿದ್ದರು.













