July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರಬ್ಬರ್ ಸೊಸೈಟಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ.ಎಸ್, ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅಧಿಕಾರ ಸ್ವೀಕಾರ

ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇದರ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹರಿಪ್ರಸಾದ್ ಐ.ಎಸ್ ಹಾಗೂ ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅವರು ಜು 1ರಂದು ಅಧಿಕಾರ ಸ್ವೀಕರಿಸಿದರು.

ಕಳೆದ 35 ವರ್ಷಗಳಿಂದ ರಬ್ಬರು ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ರಾಜು ಶೆಟ್ಟಿಯವರು ಸೇವೆ ಸಲ್ಲಿಸಿ ವೃತ್ತಿಯಿಂದ ನಿವೃತ್ತಿಯಾಗಿದ್ದು ಅವರ ಸ್ಥಾನಕ್ಕೆ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹರಿಪ್ರಸಾದ್ ಅವರನ್ನು ಆಡಳಿತ ಮಂಡಳಿ ನೇಮಕಗೊಳಿಸಿದೆ.

ನಿವೃತ್ತಿ ಹೊಂದಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರು ಸೇವೆಯಲ್ಲಿ ಅಪಾರ ಅನುಭವ ಹೊಂದಿದ್ದು ಅವರನ್ನು ಸಂಸ್ಥೆಯ ವಿಶೇಷ ಅಧಿಕಾರಿಯಾಗಿ ನೇಮಕಗೊಳಿಸಲಾಗಿದೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಜಿ ಭಿಡೆ, ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಹಾಗೂ ಆಡಳಿತ ಮಂಡಳಿಯ ಸದಸ್ಯರು,ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya
error: Content is protected !!