July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಅನುಮಾನಸ್ಪದ ರೀತಿಯಲ್ಲಿ ಯುವಕನೋರ್ವ ಮೃತದೇಹ ಪತ್ತೆ

ಬೆಳ್ತಂಗಡಿ : ಗುರುವಾಯನಕೆರೆ ಯೋನೋಪಯೋ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೋರ್ವ ಅನುಮಾನಸ್ಪದ ರೀತಿಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ಜು. 1 ರಂದು ನಡೆದಿದೆ.

ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದ ಮುಂಭಾಗ ತಡೆಗೋಡೆ ಇರುವ ಇಳಿಜಾರು ಪ್ರದೇಶದಲ್ಲಿ ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ ಅವರ ಪ್ರಥಮ ಪುತ್ರ ಮುಸ್ತಾಕ್ (27ವ) ಎಂಬಾತ ಮೃತಪಟ್ಟ ವ್ಯಕ್ತಿ.

ಮೃತ ದುರ್ದೈವಿ ಚಾಲಕ ವೃತ್ತಿ ನಡೆಸುತ್ತಿದ್ದು, ಜೂ. 30 ರಂದು ಕಲ್ಲೇರಿಯಿಂದ ಮದ್ದಡ್ಕಕ್ಕೆ ಮುಸ್ತಾಕ್ ನ್ನು ಲಾರಿ ಬೀಡಲೆಂದು ಆತನ ತಮ್ಮ ಮುನಾಸೀರ್ ಬಿಟ್ಟು ಹೋಗಿದ್ದರು. ಆದರೆ ಇಂದು ಆತನ ಶವ ಪತ್ತೆಯಾದ ಸ್ಥಿತಿಯನ್ನು ಕಂಡು ಆತನ ತಂದೆ ಶರೀಫ್ ನನ್ನ ಮಗನನ್ನು ಕೊಲೆ ಮಾಡಿ ತಂದು ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹ ಸಿಕ್ಕ ಪ್ರದೇಶದಲ್ಲಿ ಯಾವುದೇ ಸಿಸಿ ಕ್ಯಾಮೆರಾ, ಸೆಕ್ಯೂರಿಟಿ ಗಾರ್ಡ್ ಇರುವುದಿಲ್ಲ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್ ಐ ಆನಂದ್, ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya
error: Content is protected !!