July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

ಬೆಳ್ತಂಗಡಿ: ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮುರಳಿ ಬಲಿಪರವರ ನೇತೃತ್ವದಲ್ಲಿ ಜೂ.26 ರಂದು ಬಲಿಪ ರೆಸಾರ್ಟ್ ನಲ್ಲಿ ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು ಕಾರ್ಯಕ್ರಮವು ನಡೆಯಿತು.

ಲಯನ್ಸ್ ಸದಸ್ಯರಿಗಾಗಿ ಹಲವಾರು ಮನರಂಜನಾತ್ಮಕ ಚಟುವಟಿಕೆಗಳನ್ನು ನಡೆಸಲಾಯಿತು. ಸಂಜೆ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಲಯನ್ ಮುರಳಿ ಬಲಿಪರವರು ಒಂದು ವರ್ಷದ ಸಾಧನೆ ಬಗ್ಗೆ ತಿಳಿಸುತ್ತಾ ಸಹಕರಿಸಿದ ಎಲ್ಲರಿಗೂ ಸ್ಮರಣಿಕೆಗಳನ್ನು ನೀಡುವುದರ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಲಯನ್ ಅಮಿತಾನಂದ ಹೆಗ್ಡೆ, ಲಯನ್ ರಾಜು ಶೆಟ್ಟಿ, ಲಯನ್ ರಘುರಾಮ ಶೆಟ್ಟಿ, ಲಯನ್ ರವೀಂದ್ರ ಶೆಟ್ಟಿ, ಲಯನ್ ಜಯಂತ ಶೆಟ್ಟಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಲಯನ್ ವಸಂತ ಶೆಟ್ಟಿ ಶ್ರದ್ದಾ ಸ್ವಾಗತಿಸಿದರು. ಲಯನ್ ಧರಣೇಂದ್ರ ಕೆ ಜೈನ್ ಕಾರ್ಯಕ್ರಮ ನಿರೂಪಿಸಿದರು. ಲಯನ್ ಮನೋರಮ ಬಲಿಪ ಲಿಯೊ ಅಧ್ಯಕ್ಷೆ ಭಾಷಿಣಿ, ಲಯನ್ ಸುಭಾಷಿನಿ ವೇದಿಕೆಯಲ್ಲಿ ಉಸ್ಥಿತರಿದ್ದರು.

Related posts

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

Suddi Udaya
error: Content is protected !!