July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿ

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿಯು ಜೂ.28 ರಂದು ವಾಮಂಜೂರಿನಲ್ಲಿ ಜರುಗಿತು.

ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ 2025 -26 ನೇ ಸಾಲಿನ ಕಾರ್ಯ ಚಟುವಟಿಕೆಗಳಿಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿತು . ಜಿಲ್ಲೆಯಲ್ಲಿರುವ 120 ಕ್ಲಬ್ ಗಳಲ್ಲಿ ಸೇವಾ ಚಟುವಟಿಕೆಗಳಾದ ವೈದ್ಯಕೀಯ, ಸಾಮಾಜಿಕ ಹಾಗೂ ಶಿಕ್ಷಣ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ಸಮಗ್ರವಾಗಿ ಐದನೇ ಸ್ಥಾನವನ್ನು ಪಡೆಯಿತು . ಉತ್ತಮ ಅಧ್ಯಕ್ಷರಾಗಿ ಲಯನ್ ಮುರಳಿ ಬಲಿಪ ಉತ್ತಮ ಕಾರ್ಯದರ್ಶಿಯಾಗಿ ಲಯನ್ ಅಮಿತಾನಂದ ಹೆಗ್ಡೆ, ಉತ್ತಮ ಕೋಶಾಧಿಕಾರಿಯಾಗಿ ಲಯನ್ ಸುಭಾಷಿಣಿ ಪುರಸ್ಕೃತಗೊಂಡರು.

ಕ್ಲಬ್ ನ ಸದಸ್ಯರುಗಳಾದ ಲಯನ್ ರಾಜು ಶೆಟ್ಟಿ,ಲಯನ್ ರವೀಂದ್ರ ಶೆಟ್ಟಿ, ಲಯನ್ ವಸಂತ ಶೆಟ್ಟಿ ಶ್ರದ್ದಾ, ಲಯನ್ ಉಮೇಶ್ ಶೆಟ್ಟಿ, ಲಯನ್ ದೇವದಾಸ್ ಶೆಟ್ಟಿ ಲಯನ್ ಕಿರಣ್ ಕುಮಾರ್, ಲಯನ್ ನಿತ್ಯಾನಂದ ನಾವರ, ಲಯನ್ ಧರಣೇಂದ್ರ ಕೆ ಜೈನ್ ಲಯನ್ ರಘುರಾಮಶೆಟ್ಟಿ ಲಯನ್ ಪ್ರಕಾಶ್ ಶೆಟ್ಟಿ ವಿಶೇಷ ಪುರಸ್ಕಾರವನ್ನು ಪಡೆದರು.


ಉತ್ತಮ ಇಮೇಜ್ ಬಿಲ್ಡ್ ಪ್ರಾಜೆಕ್ಟ್ ಗಾಗಿ ನೂತನ ಕಟ್ಟಡ ಲಯನ್ಸ್ ಸೇವಾ ಭವನವು ಪ್ರಶಸ್ತಿಯನ್ನು ಪಡೆಯಿತು. ವಾಮಂಜೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜಿಲ್ಲಾ ಗವರ್ನರ್ ಲಯನ್ ಅರವಿಂದ ಶೆಣೈಯವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ನ ಎಲ್ಲಾ ಸದಸ್ಯರು ಭಾಗವಹಿಸಿದರು.

Related posts

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya
error: Content is protected !!