August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿ

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿಯು ಜೂ.28 ರಂದು ವಾಮಂಜೂರಿನಲ್ಲಿ ಜರುಗಿತು.

ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ 2025 -26 ನೇ ಸಾಲಿನ ಕಾರ್ಯ ಚಟುವಟಿಕೆಗಳಿಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿತು . ಜಿಲ್ಲೆಯಲ್ಲಿರುವ 120 ಕ್ಲಬ್ ಗಳಲ್ಲಿ ಸೇವಾ ಚಟುವಟಿಕೆಗಳಾದ ವೈದ್ಯಕೀಯ, ಸಾಮಾಜಿಕ ಹಾಗೂ ಶಿಕ್ಷಣ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ಸಮಗ್ರವಾಗಿ ಐದನೇ ಸ್ಥಾನವನ್ನು ಪಡೆಯಿತು . ಉತ್ತಮ ಅಧ್ಯಕ್ಷರಾಗಿ ಲಯನ್ ಮುರಳಿ ಬಲಿಪ ಉತ್ತಮ ಕಾರ್ಯದರ್ಶಿಯಾಗಿ ಲಯನ್ ಅಮಿತಾನಂದ ಹೆಗ್ಡೆ, ಉತ್ತಮ ಕೋಶಾಧಿಕಾರಿಯಾಗಿ ಲಯನ್ ಸುಭಾಷಿಣಿ ಪುರಸ್ಕೃತಗೊಂಡರು.

ಕ್ಲಬ್ ನ ಸದಸ್ಯರುಗಳಾದ ಲಯನ್ ರಾಜು ಶೆಟ್ಟಿ,ಲಯನ್ ರವೀಂದ್ರ ಶೆಟ್ಟಿ, ಲಯನ್ ವಸಂತ ಶೆಟ್ಟಿ ಶ್ರದ್ದಾ, ಲಯನ್ ಉಮೇಶ್ ಶೆಟ್ಟಿ, ಲಯನ್ ದೇವದಾಸ್ ಶೆಟ್ಟಿ ಲಯನ್ ಕಿರಣ್ ಕುಮಾರ್, ಲಯನ್ ನಿತ್ಯಾನಂದ ನಾವರ, ಲಯನ್ ಧರಣೇಂದ್ರ ಕೆ ಜೈನ್ ಲಯನ್ ರಘುರಾಮಶೆಟ್ಟಿ ಲಯನ್ ಪ್ರಕಾಶ್ ಶೆಟ್ಟಿ ವಿಶೇಷ ಪುರಸ್ಕಾರವನ್ನು ಪಡೆದರು.


ಉತ್ತಮ ಇಮೇಜ್ ಬಿಲ್ಡ್ ಪ್ರಾಜೆಕ್ಟ್ ಗಾಗಿ ನೂತನ ಕಟ್ಟಡ ಲಯನ್ಸ್ ಸೇವಾ ಭವನವು ಪ್ರಶಸ್ತಿಯನ್ನು ಪಡೆಯಿತು. ವಾಮಂಜೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜಿಲ್ಲಾ ಗವರ್ನರ್ ಲಯನ್ ಅರವಿಂದ ಶೆಣೈಯವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ನ ಎಲ್ಲಾ ಸದಸ್ಯರು ಭಾಗವಹಿಸಿದರು.

Related posts

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!