July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಜೂ. 30ರಂದು ಶಾಲಾ ಮಂತ್ರಿ ಮಂಡಲದ ಚುನಾವಣೆ ನಡೆಯಿತು.

ಕಂಟ್ರೋಲರ್ ಬಳಸಿ ಇ.ವಿ.ಎಂ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಮತದಾನಕ್ಕೆ ಅನುಕೂಲ ಒದಗಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್.ಬಿ ಅವರ ದೂರ ದೃಷ್ಟಿಯಂತೆ, ಸ್ಥಳೀಯ ಸಂಸ್ಥೆಗಳ ಚುನಾವಣಾ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ , ಚುನಾವಣಾ ಗುರುತಿನ ಚೀಟಿ, ಮತದಾರರ ಪಟ್ಟಿ, ಪ್ರತ್ಯೇಕ ಬೂತ್ ವ್ಯವಸ್ಥೆ ಮತ್ತು ಮತಗಳ ಎಣಿಕೆ ಕಾರ್ಯ ನಡೆಯಿತು.

ಶಾಲಾ ನಾಯಕಿಯಾಗಿ ಕು.ಚಿರಣ್ಯಾ , ಉಪನಾಯಕಿಯಾಗಿ ಕು.ಪ್ರಣಮ್ಯ ಎಂ.ಎಸ್, ಸಭಾಪತಿಯಾಗಿ ಕು.ಆತ್ಮೀ ಕೋಟ್ಯಾನ್, ಕ್ರೀಡಾ ಮಂತ್ರಿಯಾಗಿ ಮಾ. ಅನ್ವೇಶ್ ಮತ್ತು ವಿರೋಧ ಪಕ್ಷದ ನಾಯಕರಾಗಿ ಮಾ. ಬದರಿನಾಥ್ ಸಿ.ಪಿ ಆಯ್ಕೆಯಾದರು.‌
ಶಾಲಾ ಮುಖ್ಯೋಪಾಧ್ಯಾಯ ಶಾಂತಿರಾಜ್ ಜೈನ್ , ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಆಡಳಿತಾಧಿಕಾರಿ ಕೀರ್ತಿನಿಧಿ ಮತ್ತು ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನ ಶಿಕ್ಷಕಿ ಶ್ರೀಮತಿ ಕಾವ್ಯಶ್ರೀ ಎನ್ ಪೂರ್ವ ಸಿದ್ಧತೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಮಾರ್ಗದರ್ಶನ ಮಾಡಿದರು.

ಚುನಾವಣಾ ಅಧಿಕಾರಿಗಳಾಗಿ ಶಿಕ್ಷಕರುಗಳಾದ ಪ್ರಸಾದ್, ನಿತೇಶ್ , ದಾಮೋದರ್, ಪೂಜಾಶ್ರೀ, ಶ್ವೇತಾ ಕಿರಣ್, ಅಂಜಲಿ, ಕಾವ್ಯ ಶೆಟ್ಟಿ, ಮರಿಟಾ ಪ್ರಿಯಾ ಸೆರಾವೋ, ಮಮತಾ ಮತ್ತು ಕೃಷ್ಣಪ್ಪ ಎಂ.ಕೆ ಕಾರ್ಯ ನಿರ್ವಹಿಸಿ, ಶಿಕ್ಷಕ ವೃಂದ ಸಹಕರಿಸಿದರು.

Related posts

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya
error: Content is protected !!