27.1 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಜೂ. 30ರಂದು ಶಾಲಾ ಮಂತ್ರಿ ಮಂಡಲದ ಚುನಾವಣೆ ನಡೆಯಿತು.

ಕಂಟ್ರೋಲರ್ ಬಳಸಿ ಇ.ವಿ.ಎಂ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಮತದಾನಕ್ಕೆ ಅನುಕೂಲ ಒದಗಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್.ಬಿ ಅವರ ದೂರ ದೃಷ್ಟಿಯಂತೆ, ಸ್ಥಳೀಯ ಸಂಸ್ಥೆಗಳ ಚುನಾವಣಾ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ , ಚುನಾವಣಾ ಗುರುತಿನ ಚೀಟಿ, ಮತದಾರರ ಪಟ್ಟಿ, ಪ್ರತ್ಯೇಕ ಬೂತ್ ವ್ಯವಸ್ಥೆ ಮತ್ತು ಮತಗಳ ಎಣಿಕೆ ಕಾರ್ಯ ನಡೆಯಿತು.

ಶಾಲಾ ನಾಯಕಿಯಾಗಿ ಕು.ಚಿರಣ್ಯಾ , ಉಪನಾಯಕಿಯಾಗಿ ಕು.ಪ್ರಣಮ್ಯ ಎಂ.ಎಸ್, ಸಭಾಪತಿಯಾಗಿ ಕು.ಆತ್ಮೀ ಕೋಟ್ಯಾನ್, ಕ್ರೀಡಾ ಮಂತ್ರಿಯಾಗಿ ಮಾ. ಅನ್ವೇಶ್ ಮತ್ತು ವಿರೋಧ ಪಕ್ಷದ ನಾಯಕರಾಗಿ ಮಾ. ಬದರಿನಾಥ್ ಸಿ.ಪಿ ಆಯ್ಕೆಯಾದರು.‌
ಶಾಲಾ ಮುಖ್ಯೋಪಾಧ್ಯಾಯ ಶಾಂತಿರಾಜ್ ಜೈನ್ , ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಆಡಳಿತಾಧಿಕಾರಿ ಕೀರ್ತಿನಿಧಿ ಮತ್ತು ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನ ಶಿಕ್ಷಕಿ ಶ್ರೀಮತಿ ಕಾವ್ಯಶ್ರೀ ಎನ್ ಪೂರ್ವ ಸಿದ್ಧತೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಮಾರ್ಗದರ್ಶನ ಮಾಡಿದರು.

ಚುನಾವಣಾ ಅಧಿಕಾರಿಗಳಾಗಿ ಶಿಕ್ಷಕರುಗಳಾದ ಪ್ರಸಾದ್, ನಿತೇಶ್ , ದಾಮೋದರ್, ಪೂಜಾಶ್ರೀ, ಶ್ವೇತಾ ಕಿರಣ್, ಅಂಜಲಿ, ಕಾವ್ಯ ಶೆಟ್ಟಿ, ಮರಿಟಾ ಪ್ರಿಯಾ ಸೆರಾವೋ, ಮಮತಾ ಮತ್ತು ಕೃಷ್ಣಪ್ಪ ಎಂ.ಕೆ ಕಾರ್ಯ ನಿರ್ವಹಿಸಿ, ಶಿಕ್ಷಕ ವೃಂದ ಸಹಕರಿಸಿದರು.

Related posts

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya
error: Content is protected !!