24.1 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

ಬೆಳ್ತಂಗಡಿ: ಮಂಗಳೂರು ಕಡೆಯವರು ಒಕ್ಕಲಿಗರೇ ಅಲ್ಲ ಎಂಬ ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಯನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರವಾಗಿ ಖಂಡಿಸಿದ್ದಾರೆ.

ಮಂಗಳೂರು ಕಡೆಯವರು ಒಕ್ಕಲಿಗರೇ ಅಲ್ಲ ಎಂಬ ಹೇಳಿಕೆ ಶುದ್ಧ ಮೂರ್ಖತನದ್ದಾಗಿದ್ದು ಇತಿಹಾಸದ ಜ್ಞಾನ ಇಲ್ಲದ ಒಬ್ಬ ವ್ಯಕ್ತಿಯ ಹೇಳಿಕೆಯಾಗಿರುತ್ತದೆ. ಈ ಹೇಳಿಕೆಯಿಂದ ಅವರ ತಿಳುವಳಿಕೆಯ ಕೊರತೆಯನ್ನು ಸಮಾಜದ ಮುಂದೆ ಬಹಿರಂಗ ಪಡಿಸಿದಂತಾಗಿದೆ. ಒಬ್ಬ ಜನಪ್ರತಿನಿಧಿಯಾಗಿ ಕ್ಷೇತ್ರದ ಹಾಗೂ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಸಂಕುಚಿತ ಮನಸ್ಥಿತಿಯ ಹೇಳಿಕೆಯನ್ನು ನೀಡಿರುವುದು ದುರದೃಷ್ಟಕರ. ತಮ್ಮ ರಾಜಕೀಯ ದ್ವೇಶವನ್ನು ತೀರಿಸಿಕೊಳ್ಳಲು ಈ ರೀತಿಯ ಅನುಚಿತ ತಂತ್ರವನ್ನು ಬಳಸಿರುವುದು ಅವರ ದುಷ್ಟತನದ ಮುಖವನ್ನು ಅನಾವರಣಗೊಳಿಸಿದಂತಾಗಿದೆ. ಬ್ರಿಟಿಷರ ವಿರುದ್ಧ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಕ್ಕಿಂತಲೂ ಮುಂಚೆ (1837ರಲ್ಲಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಚ್ಚಿದ ಮಹಾನ್ ನಾಯಕ ಕೆದಂಬಾಡಿ ರಾಮಯ್ಯ ಗೌಡರ ಗೌರವಕ್ಕೆ ಧಕ್ಕೆ ತರುವ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯ ಒಕ್ಕಲಿಗ ಗೌಡರ ಇತಿಹಾಸವನ್ನು ತಿಳಿಯದೆ ಕೊಟ್ಟಿರುವ ಹೇಳಿಕೆ ದುರುದ್ದೇಶದಿಂದ ಕೂಡಿದ್ದು ಈ ಬಗ್ಗೆ ಕೂಡಲೇ ಬಹಿರಂಗ ಕ್ಷಮೆಯಾಚಿಸುವಂತೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಆಗ್ರಹ ಪಡಿಸುತ್ತದೆ. ತಪ್ಪಿದಲ್ಲಿ ಪ್ರತಿಭಟನೆಯನ್ನು ಮಾಡಲಾಗುವುದು ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!