July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

ಬೆಳ್ತಂಗಡಿ: ಮಂಗಳೂರು ಕಡೆಯವರು ಒಕ್ಕಲಿಗರೇ ಅಲ್ಲ ಎಂಬ ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಯನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರವಾಗಿ ಖಂಡಿಸಿದ್ದಾರೆ.

ಮಂಗಳೂರು ಕಡೆಯವರು ಒಕ್ಕಲಿಗರೇ ಅಲ್ಲ ಎಂಬ ಹೇಳಿಕೆ ಶುದ್ಧ ಮೂರ್ಖತನದ್ದಾಗಿದ್ದು ಇತಿಹಾಸದ ಜ್ಞಾನ ಇಲ್ಲದ ಒಬ್ಬ ವ್ಯಕ್ತಿಯ ಹೇಳಿಕೆಯಾಗಿರುತ್ತದೆ. ಈ ಹೇಳಿಕೆಯಿಂದ ಅವರ ತಿಳುವಳಿಕೆಯ ಕೊರತೆಯನ್ನು ಸಮಾಜದ ಮುಂದೆ ಬಹಿರಂಗ ಪಡಿಸಿದಂತಾಗಿದೆ. ಒಬ್ಬ ಜನಪ್ರತಿನಿಧಿಯಾಗಿ ಕ್ಷೇತ್ರದ ಹಾಗೂ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಸಂಕುಚಿತ ಮನಸ್ಥಿತಿಯ ಹೇಳಿಕೆಯನ್ನು ನೀಡಿರುವುದು ದುರದೃಷ್ಟಕರ. ತಮ್ಮ ರಾಜಕೀಯ ದ್ವೇಶವನ್ನು ತೀರಿಸಿಕೊಳ್ಳಲು ಈ ರೀತಿಯ ಅನುಚಿತ ತಂತ್ರವನ್ನು ಬಳಸಿರುವುದು ಅವರ ದುಷ್ಟತನದ ಮುಖವನ್ನು ಅನಾವರಣಗೊಳಿಸಿದಂತಾಗಿದೆ. ಬ್ರಿಟಿಷರ ವಿರುದ್ಧ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಕ್ಕಿಂತಲೂ ಮುಂಚೆ (1837ರಲ್ಲಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಚ್ಚಿದ ಮಹಾನ್ ನಾಯಕ ಕೆದಂಬಾಡಿ ರಾಮಯ್ಯ ಗೌಡರ ಗೌರವಕ್ಕೆ ಧಕ್ಕೆ ತರುವ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯ ಒಕ್ಕಲಿಗ ಗೌಡರ ಇತಿಹಾಸವನ್ನು ತಿಳಿಯದೆ ಕೊಟ್ಟಿರುವ ಹೇಳಿಕೆ ದುರುದ್ದೇಶದಿಂದ ಕೂಡಿದ್ದು ಈ ಬಗ್ಗೆ ಕೂಡಲೇ ಬಹಿರಂಗ ಕ್ಷಮೆಯಾಚಿಸುವಂತೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಆಗ್ರಹ ಪಡಿಸುತ್ತದೆ. ತಪ್ಪಿದಲ್ಲಿ ಪ್ರತಿಭಟನೆಯನ್ನು ಮಾಡಲಾಗುವುದು ತಿಳಿಸಿದ್ದಾರೆ.

Related posts

ಕಳೆಂಜ ಗ್ರಾಮದ ಕರ್ಮಾಜೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!