August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಇದರ ವತಿಯಿಂದ ಜೂ.30 ರಂದು ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಆನ್ಲೈನ್ ಮುಖಾಂತರ ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಲೀನಾ ಮತ್ತು ಶಾಲೆಯ ಸಹ ಶಿಕ್ಷಕರು , ವಲಯದ ಮೇಲ್ವಿಚಾರಕರಾದ ರವಿ, ಸೇವಾ ಪ್ರತಿನಿಧಿಗಳಾದ ಜ್ಯೋತಿ , ಗುಣವತಿ ಹಾಗೂ ಸಂತ ತೆರೇಸಾ ಪ್ರೌಢಶಾಲೆಯ 300 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಸಿ| ಲೀನಾ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಸೂಕ್ತ ಮಾಹಿತಿ ಆಯೋಜಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜಕರಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಟಿವಿ ಒದಗಿಸಿ ಕೊಟ್ಟಿದ್ದು ಇದಕ್ಕಾಗಿ ಶಾಲಾ ಆಡಳಿತ ಮಂಡಲದ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸಿದರು.

Related posts

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!