August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆಸರುಮಯವಾದ ನಾಲ್ಕೂರಿನ ಹುಂಬೆಜಲ್ಕೆ ರಸ್ತೆ: ಸರಿಪಡಿಸುವಂತೆ ಸ್ಥಳೀಯರ ಆಗ್ರಹ

ಬೆಳ್ತಂಗಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ತಾಲೂಕಿನ ಕೆಲವು ಗ್ರಾಮಗಳ ಒಳರಸ್ತೆಗಳು ಕೆಸರುಮಯವಾಗಿ ಮಾರ್ಪಟ್ಟಿದ್ದು, ಹಲವು ಕಡೆಗಳಲ್ಲಿ ಸಾಲು ಸಾಲು ಗುಂಡಿಗಳು ನಿರ್ಮಾಣಗೊಂಡಿವೆ. ಇದರಿಂದ ಪಾದಚಾರಿಗಳು ಹಾಗೂ ವಾಹನ ಸವಾರರು ಸಂಚಾರ ನಡೆಸಲು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ.
ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕ–ಪೆರ್ಮುಡ ಸಂಪರ್ಕಿಸುವ ನಾಲ್ಕೂರಿನ ಹುಂಬೆಜಲ್ಕೆ ಭಾಗದ ರಸ್ತೆಯು ಮಳೆಯ ಪರಿಣಾಮದಿಂದ ತೀವ್ರ ಹದಗೆಟ್ಟಿದ್ದು, ಈ ಭಾಗದ ಜನರು ಕೆಸರು ತುಂಬಿದ ರಸ್ತೆಯಲ್ಲಿ ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ಭಾಗದಲ್ಲಿ ನೂರಾರು ಕುಟುಂಬಗಳು ವಾಸವಾಗಿದ್ದು, ಶಾಲಾ–ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಹೈನುಗಾರರು, ದಿನಗೂಲಿ ಕಾರ್ಮಿಕರು,ಕೃಷಿಕರು, ಉದ್ಯೋಗಿಗಳು ಹಾಗೂ ಸಾರ್ವಜನಿಕರು ಪಟ್ಟಣ ಪ್ರದೇಶಗಳಿಗೆ ಸಂಚರಿಸಲು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಆದರೆ ರಸ್ತೆ ಸಂಪೂರ್ಣ ಕೆಸರುಮಯವಾಗಿರುವುದರಿಂದ ದೈನಂದಿನ ಸಂಚಾರ ದುಸ್ತರವಾಗಿದೆ.
ಪಾದಚಾರಿಗಳು ಕೆಸರನ್ನು ತಪ್ಪಿಸಲು ರಸ್ತೆ ಬದಿಯಲ್ಲಿ ಸಾಗಲು ಯತ್ನಿಸಿದರೆ, ಗಿಡಗಂಟಿಗಳು ಅಡ್ಡಿಯಾಗುತ್ತಿವೆ. ರಸ್ತೆ ಮಧ್ಯದಲ್ಲಿ ಸಾಗಲು ಪ್ರಯತ್ನಿಸಿದರೆ ಗುಂಡಿಗಳನ್ನು ತಪ್ಪಿಸಿಕೊಂಡು ಸಾಗುವುದೇ ದೊಡ್ಡ ಸವಾಲಾಗಿದೆ. ಭಾರೀ ವಾಹನಗಳು ಈ ರಸ್ತೆಯಲ್ಲಿ ಸಂಚರಿಸಿದರೆ ಕೆಸರಿನಲ್ಲಿ ಸಿಲುಕಿಕೊಳ್ಳುವ ಪರಿಸ್ಥಿತಿಯೂ ಉಂಟಾಗುತ್ತಿದೆ.

ಹೀಗಾಗಿ ರಸ್ತೆ ಬಳಕೆ ಮಾಡುವ ಪ್ರತಿಯೊಬ್ಬರೂ ಒಂದಲ್ಲೊಂದು ರೀತಿಯ ತೊಂದರೆಗಳನ್ನು ಎದುರಿಸುತ್ತಿದ್ದು, ಸಂಬಂಧಪಟ್ಟ ಇಲಾಖೆ ಹಾಗೂ ಸ್ಥಳೀಯ ಆಡಳಿತ ತಕ್ಷಣವೇ ಗಮನಹರಿಸಿ ರಸ್ತೆ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

“ಈ ಭಾಗದ ನೂರಾರು ಕುಟುಂಬಗಳಿಗೆ ಹುಂಬೆಜಲ್ಕೆ ರಸ್ತೆ ಪ್ರಮುಖ ಸಂಪರ್ಕ ರಸ್ತೆಯಾಗಿದೆ.ಪೆರ್ಮುಡಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ. ಆದರೆ ಮಳೆಗಾಲದಲ್ಲಿ ಈ ರಸ್ತೆಯಲ್ಲಿ ಸಂಚರಿಸುವುದು ಅತ್ಯಂತ ಕಷ್ಟಕರವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತ ಕೂಡಲೇ ಗಮನಹರಿಸಿ ಹದಗೆಟ್ಟಿರುವ ರಸ್ತೆಯನ್ನು ದುರಸ್ತಿ ಮಾಡಬೇಕು.” -ಸ್ಥಳೀಯರು

Related posts

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya
error: Content is protected !!