July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಅನುಮಾನಸ್ಪದ ರೀತಿಯಲ್ಲಿ ಯುವಕನೋರ್ವ ಮೃತದೇಹ ಪತ್ತೆ

ಬೆಳ್ತಂಗಡಿ : ಗುರುವಾಯನಕೆರೆ ಯೋನೋಪಯೋ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೋರ್ವ ಅನುಮಾನಸ್ಪದ ರೀತಿಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ಜು. 1 ರಂದು ನಡೆದಿದೆ.

ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದ ಮುಂಭಾಗ ತಡೆಗೋಡೆ ಇರುವ ಇಳಿಜಾರು ಪ್ರದೇಶದಲ್ಲಿ ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ ಅವರ ಪ್ರಥಮ ಪುತ್ರ ಮುಸ್ತಾಕ್ (27ವ) ಎಂಬಾತ ಮೃತಪಟ್ಟ ವ್ಯಕ್ತಿ.

ಮೃತ ದುರ್ದೈವಿ ಚಾಲಕ ವೃತ್ತಿ ನಡೆಸುತ್ತಿದ್ದು, ಜೂ. 30 ರಂದು ಕಲ್ಲೇರಿಯಿಂದ ಮದ್ದಡ್ಕಕ್ಕೆ ಮುಸ್ತಾಕ್ ನ್ನು ಲಾರಿ ಬೀಡಲೆಂದು ಆತನ ತಮ್ಮ ಮುನಾಸೀರ್ ಬಿಟ್ಟು ಹೋಗಿದ್ದರು. ಆದರೆ ಇಂದು ಆತನ ಶವ ಪತ್ತೆಯಾದ ಸ್ಥಿತಿಯನ್ನು ಕಂಡು ಆತನ ತಂದೆ ಶರೀಫ್ ನನ್ನ ಮಗನನ್ನು ಕೊಲೆ ಮಾಡಿ ತಂದು ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹ ಸಿಕ್ಕ ಪ್ರದೇಶದಲ್ಲಿ ಯಾವುದೇ ಸಿಸಿ ಕ್ಯಾಮೆರಾ, ಸೆಕ್ಯೂರಿಟಿ ಗಾರ್ಡ್ ಇರುವುದಿಲ್ಲ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್ ಐ ಆನಂದ್, ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಡಾ| ವೀಣಾ ಬನ್ನಂಜೆ ಅವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!