22.9 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನೆ

ಪುದುವೆಟ್ಟು: ಸಂಸ್ಕೃತಿ ಮತ್ತು ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶ್ರೀಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಪುದುವೆಟ್ಟು ಇಲ್ಲಿ ಆಯೋಜಿಸಲಾದ ‘ಯಕ್ಷಗಾನ ತರಬೇತಿ ಶಿಬಿರ’ದ ಉದ್ಘಾಟನಾ ಸಮಾರಂಭವು ಜೂ. 30 ರಂದು ಶಾಲಾ ಆವರಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಧರ್ಮಸ್ಥಳದ ಶ್ರೀಧ.ಮಂ. ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದರಾದ ಜನಾರ್ದನ ತೋಳ್ಪಡಿತ್ತಾಯ ಅವರು ಮಾತನಾಡಿ, “ಯಕ್ಷಗಾನವು ನಮ್ಮ ಕರಾವಳಿಯ ಹೆಮ್ಮೆಯ ಕಲೆಯಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಇಂತಹ ಕಲೆಗಳನ್ನು ಕಲಿಯುವುದರಿಂದ ವ್ಯಕ್ತಿತ್ವ ವಿಕಸನಗೊಳ್ಳುವುದಲ್ಲದೆ, ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸಾಧ್ಯವಾಗುತ್ತದೆ” ಎಂದು ನುಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಎಸ್‌ಡಿಎಂ ಕಲಾ ಕೇಂದ್ರದ ಯಕ್ಷಗಾನ ತರಬೇತುದಾರರಾದ ಅರುಣ್ ಕುಮಾರ್ ವಿದ್ಯಾರ್ಥಿಗಳಿಗೆ ತರಬೇತಿಯ ಕುರಿತು ಮಾರ್ಗದರ್ಶನ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯ ಶಿಕ್ಷಕ ಶ್ರೀ ಶೀನಪ್ಪ ಗೌಡ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಕಲಾಭಿರುಚಿಯನ್ನು ಹೊರಹಾಕಲು ಇಂತಹ ತರಬೇತಿಗಳು ಸಹಕಾರಿ ಎಂದು ತಿಳಿಸಿದರು.
ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ಶ್ರೀಮತಿ ತೇಜಾವತಿ ಉಪಸ್ಥಿತರಿದ್ದರು. ನಿಶಾಂತ್ ಕುಮಾರ್ ಸ್ವಾಗತಿಸಿದರು, ಜಿತೀಕ್ಷ ಕಾರ್ಯಕ್ರಮ ನಿರೂಪಿಸಿದರು. ಪುಷ್ಪಲತಾ ವಂದನಾರ್ಪಣೆಗೈದರು. ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು

Related posts

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರೀಕೃತ ಭತ್ತದ ನಾಟಿಗೆ ಚಾಲನೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ,

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya
error: Content is protected !!