August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಕೈಗೊಂಡಿದ್ದ ರಾಸುವಿನ ಭ್ರೂಣ ವರ್ಗಾವಣೆ ಕಾರ್ಯಕ್ರಮದ ಪ್ರಥಮ ಪ್ರಯೋಗ ಯಶಸ್ವಿಯಾಗಿದೆ.

ಕಾರ್ಯಕ್ರಮಕ್ಕೆ ಅ.11 2025 ರಂದು ದ ಕ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆರವರು ಚಾಲನೆ ನೀಡಿದ್ದರು. ಆ ಪ್ರಯುಕ್ತ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ರೇವತಿ ಗಂಗಯ್ಯ ಪೆಲತ್ತಿ ಮಾರು ಅವರ ಮನೆಯಲ್ಲಿ 2025ರ ಅಕ್ಟೋಬರ್ 12ರಂದು ರಾಸುವಿನ ಭ್ರೂಣ ವರ್ಗಾವಣೆ ಮಾಡಲಾಗಿತ್ತು. ಯಶಸ್ವಿ ಗರ್ಭಧಾರಣೆಯ ಬಳಿಕ ಜೂ.25ರಂದು ಆರೋಗ್ಯವಂತ ಜರ್ಸಿ ಹೆಣ್ಣು ಕರುವಿನ ಜನನವಾಗಿದೆ. ಇದು ಜಿಲ್ಲೆಯ ಹೈನುಗಾರಿಕೆ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಿದೆ.

ಕಾರ್ಯಕ್ರಮವು ಉಪ್ಪಿನಂಗಡಿ ಶಿಬಿರ ಕಚೇರಿಯ ಪಶುವೈದ್ಯರ ಮೇಲುಸ್ತುವಾರಿಯಲ್ಲಿ ಯಶಸ್ವಿಯಾಗಿ ನಡೆಯಿತು. ಭ್ರೂಣ
ವರ್ಗಾವಣೆ ಕಾರ್ಯಕ್ರಮದ ಒಟ್ಟು ವೆಚ್ಚ ₹21,000 ಆಗಿದ್ದು, ಇದರಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟ ರೂ.5,000, ಕರ್ನಾಟಕ ಹಾಲು ಮಹಾಮಂಡಳಿರೂ.10,000, ಕೇಂದ್ರ ಸರ್ಕಾರದ ರಾಷ್ಟ್ರೀಯ ಗೋಕುಲ ಮಿಷನ್ ರೂ.5,000, ಫಲಾನುಭವಿ ರೈತರಿಂದ ರೂ.1,000 ಒಟ್ಟು ರೂ.21,000 ವೆಚ್ಚದ ಈ ಯೋಜನೆಯಲ್ಲಿ ಹಸುವಿನ ಗರ್ಭಧಾರಣೆ ಮೂರು ತಿಂಗಳು ಯಶಸ್ವಿಯಾಗಿ ದೃಢಪಟ್ಟ ನಂತರ ಮಾತ್ರ ಫಲಾನುಭವಿ ರೈತರು ತಮ್ಮ ಪಾಲಿನ ರೂ.1,000 ಪಾವತಿಸುತ್ತಾರೆ. ಒಟ್ಟು 25 ರಾಸುಗಳ ಮೇಲೆ ಪ್ರಯೋಗ ನಡೆದಿದ್ದು ಇದರಲ್ಲಿ 5 ಯಶಸ್ವಿಯಾಗಿರುತ್ತದೆ.

ಈ ಯೋಜನೆಯು ಉತ್ತಮ ತಳಿಯ ಹಸುಗಳ ಅಭಿವೃದ್ಧಿ, ಹಾಲು ಉತ್ಪಾದನೆ ಹೆಚ್ಚಳ ಹಾಗೂ ರೈತರ ಆದಾಯ ವೃದ್ಧಿಗೆ ನೆರವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆಗೆ ಹೊಸ ಮೈಲಿಗಲ್ಲಾಗಿದೆ

Related posts

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya

ಶ್ರೀರಾಮಚಂದ್ರ ದೇವರ ವಿರುದ್ಧ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ : ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya
error: Content is protected !!