ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಲಯನ್ಸ್ ಕ್ಲಬ್ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂನ್ 30ರಂದು ನಡೆಯಿತು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ। ಬಿ. ಮುರಳಿ ಬಲಿಪ, ಅವರ ಪತ್ನಿ ಮನೋರಮ ಬಲಿಪ ಮತ್ತು ಪುತ್ರ ಮಂದಾರ ಬಲಿಪ , ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಜಿ.ರವರು, ಶಾಲಾ ಆಡಳಿತ ಸಮಿತಿಯ ಸದಸ್ಯ ವಿವೇಕ್ ಶೆಟ್ಟಿ, ಶಾಲಾ ನಾಯಕ ತೇಜಸ್ ಭಟ್ ಉಪಸ್ಥಿತರಿದ್ದರು.
ಸುಮಾರು 15 ವರ್ಷಗಳಿಂದ ಸತತವಾಗಿ ನೋಟ್ ಪುಸ್ತಕಗಳನ್ನು ನಮ್ಮ ಶಾಲಾ ಮಕ್ಕಳಿಗೆ ವಿತರಿಸುತ್ತಿದ್ದು ಪ್ರತಿ ವರ್ಷದಂತೆ ಈ ವರ್ಷವೂ ಪುಸ್ತಕ ವಿತರಿಸಿ ಮಕ್ಕಳಿಗೆ ಶುಭ ಹಾರೈಸಿದರು.
ಶಾಲಾ ಶಿಕ್ಷಕಿ ಶ್ರೀಮತಿ ಸೌಮ್ಯ ರವರು ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ವೈಶಾಲಿಯವರು ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಸುಜಾತ ರವರು ಧನ್ಯವಾದ ನೀಡಿ ಶಿಕ್ಷಕಿಯರು ಕಾರ್ಯಕ್ರಮಕ್ಕೆ ಸಹಕರಿಸಿದರು.













