July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಉಜಿರೆಯ ಖ್ಯಾತ ದಂತ ವೈದ್ಯರಾಗಿರುವ ಡಾ.ದೀಪಾಲಿ ಡೊಂಗ್ರೆ ಆಗಮಿಸಿದ್ದರು. ಶಾಲೆಯ ಕಬ್ ಹಾಗೂ ಬುಲ್ ಬುಲ್ ನ ವಿದ್ಯಾರ್ಥಿಗಳು ಇವರನ್ನು ವಿಶಿಷ್ಟ ರೀತಿಯಲ್ಲಿ ಕಿರು ಪ್ರಹಸನದ ಮೂಲಕ ಸ್ವಾಗತಿಸಿದರು. ಬಳಿಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಇಂಟರಾಕ್ಟ್ ಕ್ಲಬ್ ಹಾಗೂ ಜೂನಿಯರ್ ರೆಡ್ ಕ್ರಾಸ್ ಇದರ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು ವೃತ್ತಿ ಮಾರ್ಗದರ್ಶನ ನೀಡಿದರು.

ಎಂಬಿಬಿಎಸ್ ಇದರ ಒಳ ಹೊರಗಿನ ನೋಟಗಳು, ಡಾಕ್ಟರ್ ಆಗುವ ರೀತಿ, ಅದರಲ್ಲಿರುವ ವಿಭಾಗಗಳು,ಅದನ್ನು ಹೇಗೆ ಆಯ್ಕೆ ಮಾಡುವುದು. ವಿದ್ಯಾರ್ಥಿಗಳು ಹೇಗೆ ಓದಬೇಕು,ಗುರಿ ಹೇಗಿರಬೇಕು ಇತ್ಯಾದಿ ವಿಚಾರಗಳನ್ನು ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಅಮೂಲ್ಯ ಕಾರ್ಯಕ್ರಮ ನಿರ್ವಹಿಸಿ, ಜಾಹ್ನವಿ ಸ್ವಾಗತಿಸಿ, ನಿಧೀಕ್ಷಾ ಅತಿಥಿಗಳ ಕಿರು ಪರಿಚಯ ಮಾಡಿದರು. ಚಿಂತನ ಧನ್ಯವಾದ ಇತ್ತರು. ಶಾಲಾ ಶಿಕ್ಷಕ ವೃಂದ ಹಾಗು ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಆರೋಗ್ಯ ಇಲಾಖೆ ವತಿಯಿಂದ ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಮನ್ ಷ್ಯರ್ ಪ್ಯಾರ ಮೆಡಿಕಲ್ ವಿದ್ಯಾರ್ಥಿಗಳ ಸಾಥ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya
error: Content is protected !!