ಉಜಿರೆ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇದರ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹರಿಪ್ರಸಾದ್ ಐ.ಎಸ್ ಹಾಗೂ ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅವರು ಜು 1ರಂದು ಅಧಿಕಾರ ಸ್ವೀಕರಿಸಿದರು.

ಕಳೆದ 35 ವರ್ಷಗಳಿಂದ ರಬ್ಬರು ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ರಾಜು ಶೆಟ್ಟಿಯವರು ಸೇವೆ ಸಲ್ಲಿಸಿ ವೃತ್ತಿಯಿಂದ ನಿವೃತ್ತಿಯಾಗಿದ್ದು ಅವರ ಸ್ಥಾನಕ್ಕೆ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹರಿಪ್ರಸಾದ್ ಅವರನ್ನು ಆಡಳಿತ ಮಂಡಳಿ ನೇಮಕಗೊಳಿಸಿದೆ.
ನಿವೃತ್ತಿ ಹೊಂದಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಯವರು ಸೇವೆಯಲ್ಲಿ ಅಪಾರ ಅನುಭವ ಹೊಂದಿದ್ದು ಅವರನ್ನು ಸಂಸ್ಥೆಯ ವಿಶೇಷ ಅಧಿಕಾರಿಯಾಗಿ ನೇಮಕಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಜಿ ಭಿಡೆ, ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಹಾಗೂ ಆಡಳಿತ ಮಂಡಳಿಯ ಸದಸ್ಯರು,ಸಿಬ್ಬಂದಿಗಳು ಉಪಸ್ಥಿತರಿದ್ದರು.













