29.4 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಅನುಮಾನಸ್ಪದ ರೀತಿಯಲ್ಲಿ ಯುವಕನೋರ್ವ ಮೃತದೇಹ ಪತ್ತೆ

ಬೆಳ್ತಂಗಡಿ : ಗುರುವಾಯನಕೆರೆ ಯೋನೋಪಯೋ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೋರ್ವ ಅನುಮಾನಸ್ಪದ ರೀತಿಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ಜು. 1 ರಂದು ನಡೆದಿದೆ.

ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದ ಮುಂಭಾಗ ತಡೆಗೋಡೆ ಇರುವ ಇಳಿಜಾರು ಪ್ರದೇಶದಲ್ಲಿ ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ ಅವರ ಪ್ರಥಮ ಪುತ್ರ ಮುಸ್ತಾಕ್ (27ವ) ಎಂಬಾತ ಮೃತಪಟ್ಟ ವ್ಯಕ್ತಿ.

ಮೃತ ದುರ್ದೈವಿ ಚಾಲಕ ವೃತ್ತಿ ನಡೆಸುತ್ತಿದ್ದು, ಜೂ. 30 ರಂದು ಕಲ್ಲೇರಿಯಿಂದ ಮದ್ದಡ್ಕಕ್ಕೆ ಮುಸ್ತಾಕ್ ನ್ನು ಲಾರಿ ಬೀಡಲೆಂದು ಆತನ ತಮ್ಮ ಮುನಾಸೀರ್ ಬಿಟ್ಟು ಹೋಗಿದ್ದರು. ಆದರೆ ಇಂದು ಆತನ ಶವ ಪತ್ತೆಯಾದ ಸ್ಥಿತಿಯನ್ನು ಕಂಡು ಆತನ ತಂದೆ ಶರೀಫ್ ನನ್ನ ಮಗನನ್ನು ಕೊಲೆ ಮಾಡಿ ತಂದು ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತದೇಹ ಸಿಕ್ಕ ಪ್ರದೇಶದಲ್ಲಿ ಯಾವುದೇ ಸಿಸಿ ಕ್ಯಾಮೆರಾ, ಸೆಕ್ಯೂರಿಟಿ ಗಾರ್ಡ್ ಇರುವುದಿಲ್ಲ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್ ಐ ಆನಂದ್, ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
error: Content is protected !!