22.9 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ :ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಎಸ್. ಡಿ ಯಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಮುಖ್ಯ ವೈದ್ಯಧಿಕಾರಿಯಾಗಿರುವ ಡಾ. ಶಿವಪ್ರಸಾದ್ ಶೆಟ್ಟಿ ಆಗಮಿಸಿ ‘truth is God, God is truth’ ಸತ್ಯ, ಪ್ರಾಮಾಣಿಕತೆ, ಪಾರದರ್ಶಕತೆ, ಧನಾತ್ಮಕ ಚಿಂತನೆಗಳ ಮೂಲಕ ನಾವು ಬಲಿಷ್ಠರಾಗಿದ್ದರೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯಯುತವಾಗಿರಬಹುದು, ಯಾವುದೇ ರೋಗಗಳನ್ನು ಹಿಮ್ಮೆಟ್ಟಿಸಬಹುದು ವೈದ್ಯರು ನಮ್ಮಲ್ಲಿ ಸಕಾರಾತ್ಮಕ ಚಿಂತನೆಯನ್ನು ಉದ್ದೀಪನ ಗೊಳಿಸಿ ನಮ್ಮ ಪಾಲಿಗೆ ದೇವತಾ ಸ್ವರೂಪಿಗಳಾಗಿ ವೈದ್ಯೋ ನಾರಾಯಣೋ ಹರಿ :ಎಂಬ ಮಾತಿಗೆ ಸಾಕ್ಷಿಯಾಗುತ್ತಾರೆ ಎಂದು ಹೇಳಿದರು.

ವೈದ್ಯಲೋಕದ ದಂತಕಥೆ ಯಾದ ಡಾ. ಬಿ ಸಿ ರಾಯ್ ರವರ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ನಿಸ್ವಾರ್ಥ ಸೇವೆ, ತ್ಯಾಗವನ್ನು ಸ್ಮರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿಕೊಂಡಿದ್ದರು.
ಶಿಕ್ಷಕಿ ಪೂರ್ಣಿಮ ಕೆಎಂ ನಿರೂಪಿಸಿದ ಈ ಕಾರ್ಯಕ್ರಮಕ್ಕೆ ಶಿಕ್ಷಕಿ ಕೇಶವತಿ ಕೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ ಕೆ ವಂದಿಸಿದರು.

Related posts

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya
error: Content is protected !!