July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ :ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಎಸ್. ಡಿ ಯಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಮುಖ್ಯ ವೈದ್ಯಧಿಕಾರಿಯಾಗಿರುವ ಡಾ. ಶಿವಪ್ರಸಾದ್ ಶೆಟ್ಟಿ ಆಗಮಿಸಿ ‘truth is God, God is truth’ ಸತ್ಯ, ಪ್ರಾಮಾಣಿಕತೆ, ಪಾರದರ್ಶಕತೆ, ಧನಾತ್ಮಕ ಚಿಂತನೆಗಳ ಮೂಲಕ ನಾವು ಬಲಿಷ್ಠರಾಗಿದ್ದರೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯಯುತವಾಗಿರಬಹುದು, ಯಾವುದೇ ರೋಗಗಳನ್ನು ಹಿಮ್ಮೆಟ್ಟಿಸಬಹುದು ವೈದ್ಯರು ನಮ್ಮಲ್ಲಿ ಸಕಾರಾತ್ಮಕ ಚಿಂತನೆಯನ್ನು ಉದ್ದೀಪನ ಗೊಳಿಸಿ ನಮ್ಮ ಪಾಲಿಗೆ ದೇವತಾ ಸ್ವರೂಪಿಗಳಾಗಿ ವೈದ್ಯೋ ನಾರಾಯಣೋ ಹರಿ :ಎಂಬ ಮಾತಿಗೆ ಸಾಕ್ಷಿಯಾಗುತ್ತಾರೆ ಎಂದು ಹೇಳಿದರು.

ವೈದ್ಯಲೋಕದ ದಂತಕಥೆ ಯಾದ ಡಾ. ಬಿ ಸಿ ರಾಯ್ ರವರ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ, ನಿಸ್ವಾರ್ಥ ಸೇವೆ, ತ್ಯಾಗವನ್ನು ಸ್ಮರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿಕೊಂಡಿದ್ದರು.
ಶಿಕ್ಷಕಿ ಪೂರ್ಣಿಮ ಕೆಎಂ ನಿರೂಪಿಸಿದ ಈ ಕಾರ್ಯಕ್ರಮಕ್ಕೆ ಶಿಕ್ಷಕಿ ಕೇಶವತಿ ಕೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸಂಜೀವ ಕೆ ವಂದಿಸಿದರು.

Related posts

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕ ದೀಪಕ್ ಎ.ಎಸ್. ಲೋಕಸಭಾ ಸಂಸದ ಬ್ರಿಜೇಶ್ ಚೌಟರ ಭೇಟಿ

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಕಾರಿಂಜ ವನಶಾಸ್ತಾರ, ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಚಪ್ಪರ ಮೂಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!