ಬೆಳ್ತಂಗಡಿ: ರಾಜ್ಯಾದ್ಯಂತ ಜೂ.30 ರಂದು ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್.ಐ ಆರ್) ಆರಂಭಗೊಂಡಿದ್ದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹೊನ್ನಪ್ಪ ಗೌಡ ರವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಎಸ್.ಐ ಆರ್ ನ ಗಣತಿ ಫಾರಂ(enumeration form) ವಿತರಿಸಿದರು.

ನಂತರ ಬೆಳಾಲು ಗ್ರಾಮದ 101 ವರ್ಷ ವಯಸ್ಸಿನ ಪರಮೇಶ್ವರಿ ಇವರಿಗೆ ಎಸ್.ಐ ಆರ್ ನ ಗಣತಿ ಫಾರಂ(enumeration form) ವಿತರಿಸಿದರು.













