ಬೆಳ್ತಂಗಡಿ: ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮುರಳಿ ಬಲಿಪರವರ ನೇತೃತ್ವದಲ್ಲಿ ಜೂ.26 ರಂದು ಬಲಿಪ ರೆಸಾರ್ಟ್ ನಲ್ಲಿ ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು ಕಾರ್ಯಕ್ರಮವು ನಡೆಯಿತು.
ಲಯನ್ಸ್ ಸದಸ್ಯರಿಗಾಗಿ ಹಲವಾರು ಮನರಂಜನಾತ್ಮಕ ಚಟುವಟಿಕೆಗಳನ್ನು ನಡೆಸಲಾಯಿತು. ಸಂಜೆ ನಡೆದ ಸಮಾರಂಭದಲ್ಲಿ ಅಧ್ಯಕ್ಷ ಲಯನ್ ಮುರಳಿ ಬಲಿಪರವರು ಒಂದು ವರ್ಷದ ಸಾಧನೆ ಬಗ್ಗೆ ತಿಳಿಸುತ್ತಾ ಸಹಕರಿಸಿದ ಎಲ್ಲರಿಗೂ ಸ್ಮರಣಿಕೆಗಳನ್ನು ನೀಡುವುದರ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಲಯನ್ ಅಮಿತಾನಂದ ಹೆಗ್ಡೆ, ಲಯನ್ ರಾಜು ಶೆಟ್ಟಿ, ಲಯನ್ ರಘುರಾಮ ಶೆಟ್ಟಿ, ಲಯನ್ ರವೀಂದ್ರ ಶೆಟ್ಟಿ, ಲಯನ್ ಜಯಂತ ಶೆಟ್ಟಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಲಯನ್ ವಸಂತ ಶೆಟ್ಟಿ ಶ್ರದ್ದಾ ಸ್ವಾಗತಿಸಿದರು. ಲಯನ್ ಧರಣೇಂದ್ರ ಕೆ ಜೈನ್ ಕಾರ್ಯಕ್ರಮ ನಿರೂಪಿಸಿದರು. ಲಯನ್ ಮನೋರಮ ಬಲಿಪ ಲಿಯೊ ಅಧ್ಯಕ್ಷೆ ಭಾಷಿಣಿ, ಲಯನ್ ಸುಭಾಷಿನಿ ವೇದಿಕೆಯಲ್ಲಿ ಉಸ್ಥಿತರಿದ್ದರು.













