22.9 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಜೂ. 30ರಂದು ಶಾಲಾ ಮಂತ್ರಿ ಮಂಡಲದ ಚುನಾವಣೆ ನಡೆಯಿತು.

ಕಂಟ್ರೋಲರ್ ಬಳಸಿ ಇ.ವಿ.ಎಂ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಮತದಾನಕ್ಕೆ ಅನುಕೂಲ ಒದಗಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್.ಬಿ ಅವರ ದೂರ ದೃಷ್ಟಿಯಂತೆ, ಸ್ಥಳೀಯ ಸಂಸ್ಥೆಗಳ ಚುನಾವಣಾ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ , ಚುನಾವಣಾ ಗುರುತಿನ ಚೀಟಿ, ಮತದಾರರ ಪಟ್ಟಿ, ಪ್ರತ್ಯೇಕ ಬೂತ್ ವ್ಯವಸ್ಥೆ ಮತ್ತು ಮತಗಳ ಎಣಿಕೆ ಕಾರ್ಯ ನಡೆಯಿತು.

ಶಾಲಾ ನಾಯಕಿಯಾಗಿ ಕು.ಚಿರಣ್ಯಾ , ಉಪನಾಯಕಿಯಾಗಿ ಕು.ಪ್ರಣಮ್ಯ ಎಂ.ಎಸ್, ಸಭಾಪತಿಯಾಗಿ ಕು.ಆತ್ಮೀ ಕೋಟ್ಯಾನ್, ಕ್ರೀಡಾ ಮಂತ್ರಿಯಾಗಿ ಮಾ. ಅನ್ವೇಶ್ ಮತ್ತು ವಿರೋಧ ಪಕ್ಷದ ನಾಯಕರಾಗಿ ಮಾ. ಬದರಿನಾಥ್ ಸಿ.ಪಿ ಆಯ್ಕೆಯಾದರು.‌
ಶಾಲಾ ಮುಖ್ಯೋಪಾಧ್ಯಾಯ ಶಾಂತಿರಾಜ್ ಜೈನ್ , ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಆಡಳಿತಾಧಿಕಾರಿ ಕೀರ್ತಿನಿಧಿ ಮತ್ತು ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನ ಶಿಕ್ಷಕಿ ಶ್ರೀಮತಿ ಕಾವ್ಯಶ್ರೀ ಎನ್ ಪೂರ್ವ ಸಿದ್ಧತೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಮಾರ್ಗದರ್ಶನ ಮಾಡಿದರು.

ಚುನಾವಣಾ ಅಧಿಕಾರಿಗಳಾಗಿ ಶಿಕ್ಷಕರುಗಳಾದ ಪ್ರಸಾದ್, ನಿತೇಶ್ , ದಾಮೋದರ್, ಪೂಜಾಶ್ರೀ, ಶ್ವೇತಾ ಕಿರಣ್, ಅಂಜಲಿ, ಕಾವ್ಯ ಶೆಟ್ಟಿ, ಮರಿಟಾ ಪ್ರಿಯಾ ಸೆರಾವೋ, ಮಮತಾ ಮತ್ತು ಕೃಷ್ಣಪ್ಪ ಎಂ.ಕೆ ಕಾರ್ಯ ನಿರ್ವಹಿಸಿ, ಶಿಕ್ಷಕ ವೃಂದ ಸಹಕರಿಸಿದರು.

Related posts

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya
error: Content is protected !!