July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಜೂ. 30ರಂದು ಶಾಲಾ ಮಂತ್ರಿ ಮಂಡಲದ ಚುನಾವಣೆ ನಡೆಯಿತು.

ಕಂಟ್ರೋಲರ್ ಬಳಸಿ ಇ.ವಿ.ಎಂ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ಮತದಾನಕ್ಕೆ ಅನುಕೂಲ ಒದಗಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್.ಬಿ ಅವರ ದೂರ ದೃಷ್ಟಿಯಂತೆ, ಸ್ಥಳೀಯ ಸಂಸ್ಥೆಗಳ ಚುನಾವಣಾ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ , ಚುನಾವಣಾ ಗುರುತಿನ ಚೀಟಿ, ಮತದಾರರ ಪಟ್ಟಿ, ಪ್ರತ್ಯೇಕ ಬೂತ್ ವ್ಯವಸ್ಥೆ ಮತ್ತು ಮತಗಳ ಎಣಿಕೆ ಕಾರ್ಯ ನಡೆಯಿತು.

ಶಾಲಾ ನಾಯಕಿಯಾಗಿ ಕು.ಚಿರಣ್ಯಾ , ಉಪನಾಯಕಿಯಾಗಿ ಕು.ಪ್ರಣಮ್ಯ ಎಂ.ಎಸ್, ಸಭಾಪತಿಯಾಗಿ ಕು.ಆತ್ಮೀ ಕೋಟ್ಯಾನ್, ಕ್ರೀಡಾ ಮಂತ್ರಿಯಾಗಿ ಮಾ. ಅನ್ವೇಶ್ ಮತ್ತು ವಿರೋಧ ಪಕ್ಷದ ನಾಯಕರಾಗಿ ಮಾ. ಬದರಿನಾಥ್ ಸಿ.ಪಿ ಆಯ್ಕೆಯಾದರು.‌
ಶಾಲಾ ಮುಖ್ಯೋಪಾಧ್ಯಾಯ ಶಾಂತಿರಾಜ್ ಜೈನ್ , ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಆಡಳಿತಾಧಿಕಾರಿ ಕೀರ್ತಿನಿಧಿ ಮತ್ತು ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನ ಶಿಕ್ಷಕಿ ಶ್ರೀಮತಿ ಕಾವ್ಯಶ್ರೀ ಎನ್ ಪೂರ್ವ ಸಿದ್ಧತೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಮಾರ್ಗದರ್ಶನ ಮಾಡಿದರು.

ಚುನಾವಣಾ ಅಧಿಕಾರಿಗಳಾಗಿ ಶಿಕ್ಷಕರುಗಳಾದ ಪ್ರಸಾದ್, ನಿತೇಶ್ , ದಾಮೋದರ್, ಪೂಜಾಶ್ರೀ, ಶ್ವೇತಾ ಕಿರಣ್, ಅಂಜಲಿ, ಕಾವ್ಯ ಶೆಟ್ಟಿ, ಮರಿಟಾ ಪ್ರಿಯಾ ಸೆರಾವೋ, ಮಮತಾ ಮತ್ತು ಕೃಷ್ಣಪ್ಪ ಎಂ.ಕೆ ಕಾರ್ಯ ನಿರ್ವಹಿಸಿ, ಶಿಕ್ಷಕ ವೃಂದ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!