July 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

ಬೆಳ್ತಂಗಡಿ: ಮಂಗಳೂರು ಕಡೆಯವರು ಒಕ್ಕಲಿಗರೇ ಅಲ್ಲ ಎಂಬ ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಯನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರವಾಗಿ ಖಂಡಿಸಿದ್ದಾರೆ.

ಮಂಗಳೂರು ಕಡೆಯವರು ಒಕ್ಕಲಿಗರೇ ಅಲ್ಲ ಎಂಬ ಹೇಳಿಕೆ ಶುದ್ಧ ಮೂರ್ಖತನದ್ದಾಗಿದ್ದು ಇತಿಹಾಸದ ಜ್ಞಾನ ಇಲ್ಲದ ಒಬ್ಬ ವ್ಯಕ್ತಿಯ ಹೇಳಿಕೆಯಾಗಿರುತ್ತದೆ. ಈ ಹೇಳಿಕೆಯಿಂದ ಅವರ ತಿಳುವಳಿಕೆಯ ಕೊರತೆಯನ್ನು ಸಮಾಜದ ಮುಂದೆ ಬಹಿರಂಗ ಪಡಿಸಿದಂತಾಗಿದೆ. ಒಬ್ಬ ಜನಪ್ರತಿನಿಧಿಯಾಗಿ ಕ್ಷೇತ್ರದ ಹಾಗೂ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಸಂಕುಚಿತ ಮನಸ್ಥಿತಿಯ ಹೇಳಿಕೆಯನ್ನು ನೀಡಿರುವುದು ದುರದೃಷ್ಟಕರ. ತಮ್ಮ ರಾಜಕೀಯ ದ್ವೇಶವನ್ನು ತೀರಿಸಿಕೊಳ್ಳಲು ಈ ರೀತಿಯ ಅನುಚಿತ ತಂತ್ರವನ್ನು ಬಳಸಿರುವುದು ಅವರ ದುಷ್ಟತನದ ಮುಖವನ್ನು ಅನಾವರಣಗೊಳಿಸಿದಂತಾಗಿದೆ. ಬ್ರಿಟಿಷರ ವಿರುದ್ಧ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಕ್ಕಿಂತಲೂ ಮುಂಚೆ (1837ರಲ್ಲಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಚ್ಚಿದ ಮಹಾನ್ ನಾಯಕ ಕೆದಂಬಾಡಿ ರಾಮಯ್ಯ ಗೌಡರ ಗೌರವಕ್ಕೆ ಧಕ್ಕೆ ತರುವ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯ ಒಕ್ಕಲಿಗ ಗೌಡರ ಇತಿಹಾಸವನ್ನು ತಿಳಿಯದೆ ಕೊಟ್ಟಿರುವ ಹೇಳಿಕೆ ದುರುದ್ದೇಶದಿಂದ ಕೂಡಿದ್ದು ಈ ಬಗ್ಗೆ ಕೂಡಲೇ ಬಹಿರಂಗ ಕ್ಷಮೆಯಾಚಿಸುವಂತೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಆಗ್ರಹ ಪಡಿಸುತ್ತದೆ. ತಪ್ಪಿದಲ್ಲಿ ಪ್ರತಿಭಟನೆಯನ್ನು ಮಾಡಲಾಗುವುದು ತಿಳಿಸಿದ್ದಾರೆ.

Related posts

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya
error: Content is protected !!