ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಉಜಿರೆಯ ಖ್ಯಾತ ದಂತ ವೈದ್ಯರಾಗಿರುವ ಡಾ.ದೀಪಾಲಿ ಡೊಂಗ್ರೆ ಆಗಮಿಸಿದ್ದರು. ಶಾಲೆಯ ಕಬ್ ಹಾಗೂ ಬುಲ್ ಬುಲ್ ನ ವಿದ್ಯಾರ್ಥಿಗಳು ಇವರನ್ನು ವಿಶಿಷ್ಟ ರೀತಿಯಲ್ಲಿ ಕಿರು ಪ್ರಹಸನದ ಮೂಲಕ ಸ್ವಾಗತಿಸಿದರು. ಬಳಿಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಇಂಟರಾಕ್ಟ್ ಕ್ಲಬ್ ಹಾಗೂ ಜೂನಿಯರ್ ರೆಡ್ ಕ್ರಾಸ್ ಇದರ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು ವೃತ್ತಿ ಮಾರ್ಗದರ್ಶನ ನೀಡಿದರು.
ಎಂಬಿಬಿಎಸ್ ಇದರ ಒಳ ಹೊರಗಿನ ನೋಟಗಳು, ಡಾಕ್ಟರ್ ಆಗುವ ರೀತಿ, ಅದರಲ್ಲಿರುವ ವಿಭಾಗಗಳು,ಅದನ್ನು ಹೇಗೆ ಆಯ್ಕೆ ಮಾಡುವುದು. ವಿದ್ಯಾರ್ಥಿಗಳು ಹೇಗೆ ಓದಬೇಕು,ಗುರಿ ಹೇಗಿರಬೇಕು ಇತ್ಯಾದಿ ವಿಚಾರಗಳನ್ನು ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ಮೂಡಿಬಂದ ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಅಮೂಲ್ಯ ಕಾರ್ಯಕ್ರಮ ನಿರ್ವಹಿಸಿ, ಜಾಹ್ನವಿ ಸ್ವಾಗತಿಸಿ, ನಿಧೀಕ್ಷಾ ಅತಿಥಿಗಳ ಕಿರು ಪರಿಚಯ ಮಾಡಿದರು. ಚಿಂತನ ಧನ್ಯವಾದ ಇತ್ತರು. ಶಾಲಾ ಶಿಕ್ಷಕ ವೃಂದ ಹಾಗು ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.













