23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶಾಂತಿವನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಧರ್ಮಸ್ಥಳದ ಶಾಂತಿವನದಲ್ಲಿ ಜು. 1ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಖ್ಯಾತ ವೈದ್ಯರಾದ ಡಾ. ಬಿಧಾನ್ ಚಂದ್ರ ರಾಯ್ ಅವರ ಜನ್ಮದಿನ ಹಾಗೂ ಪುಣ್ಯತಿಥಿಯ ಸ್ಮರಣಾರ್ಥವಾಗಿ ವೈದ್ಯರ ಸೇವೆ, ಸಮರ್ಪಣೆ ಹಾಗೂ ಮಾನವೀಯತೆಯನ್ನು ಗೌರವಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್ ಶೆಟ್ಟಿ ಮಾತನಾಡಿ, ವೈದ್ಯ ವೃತ್ತಿಯು ಕೇವಲ ಉದ್ಯೋಗವಲ್ಲ, ಸಮಾಜಸೇವೆಯ ಮಹತ್ತರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ರೋಗಿಗಳ ಸೇವೆಯಲ್ಲಿ ಕರುಣೆ, ನಿಷ್ಠೆ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ವೈದ್ಯರ ಕರ್ತವ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಂತಿವನದ ಸಾಧಕರಾದ ಸೋಮಶೇಖರ್ ಭಾಗವಹಿಸಿ, ವೈದ್ಯರ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಜಗನ್ನಾಥ್, ಹಿರಿಯ ವೈದ್ಯಾಧಿಕಾರಿಗಳಾದ ಡಾ. ಸುಜಾತಾ ಕೆ. ಎ. ಹಾಗೂ ಡಾ. ಗೀತಾ ಬಿ. ಶೆಟ್ಟಿ, ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ. ಬಿಂದು, ಯೋಗ ಮತ್ತು ನೈತಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವೈದ್ಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವೈದ್ಯರ ಸೇವೆಯನ್ನು ಸ್ಮರಿಸಿ, ಅವರನ್ನು ಗೌರವಿಸಲಾಯಿತು.

Related posts

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಎಕ್ಸೆಲ್‌ನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya
error: Content is protected !!