23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

ಮುಂಡಾಜೆ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಡಾಜೆ ಇಲ್ಲಿ ಜೂ.30 ರಂದು ಯಕ್ಷ ಧ್ರುವ ಪಟ್ಲ ಪೌಂಡೇಶನ್ (ರಿ) ವತಿಯಿಂದ ಯಕ್ಷಗಾನ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿ ಗಳಾದ ಸಾತ್ವಿಕ್ ಪಿ ಹಾಗೂ ಡಿ ವಿಜಿತ್ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮಂತ್ರಿಮಂಡಲದ ನಾಯಕನಾದ ಜಶ್ವಿನ್ ಬಿ ಎಸ್ ವಹಿಸಿಕೊಂಡಿದ್ದರು. ಯಕ್ಷದ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಯಕ್ಷದ್ರುವ ಪಟ್ಲ ಪೌಂಡೇಶನ್ (ರಿ)ಬೆಳ್ತಂಗಡಿ ಘಟಕ ಇದರ ಕಾರ್ಯದರ್ಶಿ ಶೃತಿ ಕಂಠ ಭಟ್ ಯಕ್ಷಗಾನ ಕಲಿಕೆ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ , ಶಾಲಾ ಪ್ರಾಂಶುಪಾಲರಾದ ಮುರಳಿಧರ್ ಜಿ ಎನ್ , ಕಂಪ್ಯೂಟರ್ ಶಿಕ್ಷಕಿ ಹಾಗೂ ನಿಲಯಪಾಲಕಿಯಾದ ರೋಹಿಣಿ ಆರ್ ಜಿ ,ಯಕ್ಷಗಾನ ತರಗತಿಯ ಶಾಲಾ ಸಂಚಾಲಕರಾದ ಸುರಕ್ಷಾ ಉಪಸ್ಥಿತರಿದ್ದರು . ಕಾರ್ಯಕ್ರಮವನ್ನು ಹತ್ತನೇ ತರಗತಿಯ ತನ್ವಿತ್ ಸ್ವಾಗತಿಸಿದರು , ಉಲ್ಲಾಸ್ ವಂದಿಸಿದರು, ತನ್ವಿತ್ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ರೋಟರಿ ಸಮುದಾಯ ದಳಗಳ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
error: Content is protected !!