July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

ಮುಂಡಾಜೆ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಡಾಜೆ ಇಲ್ಲಿ ಜೂ.30 ರಂದು ಯಕ್ಷ ಧ್ರುವ ಪಟ್ಲ ಪೌಂಡೇಶನ್ (ರಿ) ವತಿಯಿಂದ ಯಕ್ಷಗಾನ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿ ಗಳಾದ ಸಾತ್ವಿಕ್ ಪಿ ಹಾಗೂ ಡಿ ವಿಜಿತ್ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮಂತ್ರಿಮಂಡಲದ ನಾಯಕನಾದ ಜಶ್ವಿನ್ ಬಿ ಎಸ್ ವಹಿಸಿಕೊಂಡಿದ್ದರು. ಯಕ್ಷದ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಯಕ್ಷದ್ರುವ ಪಟ್ಲ ಪೌಂಡೇಶನ್ (ರಿ)ಬೆಳ್ತಂಗಡಿ ಘಟಕ ಇದರ ಕಾರ್ಯದರ್ಶಿ ಶೃತಿ ಕಂಠ ಭಟ್ ಯಕ್ಷಗಾನ ಕಲಿಕೆ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ , ಶಾಲಾ ಪ್ರಾಂಶುಪಾಲರಾದ ಮುರಳಿಧರ್ ಜಿ ಎನ್ , ಕಂಪ್ಯೂಟರ್ ಶಿಕ್ಷಕಿ ಹಾಗೂ ನಿಲಯಪಾಲಕಿಯಾದ ರೋಹಿಣಿ ಆರ್ ಜಿ ,ಯಕ್ಷಗಾನ ತರಗತಿಯ ಶಾಲಾ ಸಂಚಾಲಕರಾದ ಸುರಕ್ಷಾ ಉಪಸ್ಥಿತರಿದ್ದರು . ಕಾರ್ಯಕ್ರಮವನ್ನು ಹತ್ತನೇ ತರಗತಿಯ ತನ್ವಿತ್ ಸ್ವಾಗತಿಸಿದರು , ಉಲ್ಲಾಸ್ ವಂದಿಸಿದರು, ತನ್ವಿತ್ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya
error: Content is protected !!