23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ:ಎಸ್.ಡಿ.ಎಂ ಮಹಿಳಾ ಐ.ಟಿ.ಐ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ

ಉಜಿರೆ: ಎಸ್.ಡಿ.ಎಂ ಮಹಿಳಾ ಐ.ಟಿ.ಐ ಉಜಿರೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಡಿಪ್ಲೋಮಾ ಕಾಲೇಜಿನ ಉಪ ಪ್ರಾಂಶುಪಾಲರಾದ ಅಮರೇಶ ಹೆಬ್ಬಾರ್, ಎಸ್.ಡಿ.ಎಂ ಐ.ಟಿ.ಐ ವೇಣೂರು ಕಾಲೇಜಿನ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್, ಪತ್ರಕರ್ತೆ ಶ್ರೇಯಾ ಶೆಟ್ಟಿ, ಪತ್ರಕರ್ತ ನಿಶಾನ್ ಬಂಗೇರ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯವಾದ ಕುಮಾರ್ ಉಪಸ್ಥಿತರಿದ್ದರು.

ಆರಂಭದ ವಿದ್ಯಾರ್ಥಿನಿಯರಾದ ರೂಪಾ ಶೆಟ್ಟಿ ಇವರು ಅಂದು ಇದ್ದ ಹಾಗೂ ಇಂದು ಇರುವ ಸಂಸ್ಥೆಯ ಎಲ್ಲಾ ಸೌಕರ್ಯ, ಶಿಕ್ಷಣ ನೀಡುವ ಪದ್ದತಿ ಉದ್ಯೋಗದ ಅವಕಾಶ ಮುಂತಾದ ವಿಷಯದ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಹಿರಿಯ ವಿದ್ಯಾರ್ಥಿನಿ ಶಶಿಪ್ರಭ ಶುಭ ಹಾರೈಸಿದರು.

ಸಂಸ್ಥೆಯ ಪ್ರಾಚಾರ್ಯ ಪ್ರಕಾಶ್ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕ್ಷಮಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಂದ್ಯಾ ಧನ್ಯವಾದವಿತ್ತರು.

ಇದೇ ಸಂದರ್ಭದಲ್ಲಿ ಮಳೆಗಾಲದ ತಿನಿಸುಗಳು ಎಂಬ ಶೀರ್ಷಿಕೆಯ ಅಡಿಯಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ತಮ್ಮ ತಮ್ಮ ಮನೆಯಿಂದ ವಿವಿಧ ಬಗೆಯ ಹಲಸಿನ, ಮಾವಿನ ತಿಂಡಿ ತಿನಿಸುಗಳು, ಹಲವು ಬಗೆಯ ಪದಾರ್ಥಗಳು, ಸಿಹಿ ತಿನಿಸುಗಳನ್ನು ಮಾಡಿಕೊಂಡು ಬಂದಿದ್ದು ಎಲ್ಲರೂ ಸೇರಿ ಹಂಚಿ ತಿನ್ನುವ ಮೂಲಕ ನಾವೆಲ್ಲಾ ಒಂದೇ ಕುಟುಂಬದ ಸದಸ್ಯರು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಕರಾಯ ಮಸೀದಿ ಬಳಿ ಮೋರಿ ಕುಸಿತ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya
error: Content is protected !!