ಉಜಿರೆ: ಎಸ್.ಡಿ.ಎಂ ಮಹಿಳಾ ಐ.ಟಿ.ಐ ಉಜಿರೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಡಿಪ್ಲೋಮಾ ಕಾಲೇಜಿನ ಉಪ ಪ್ರಾಂಶುಪಾಲರಾದ ಅಮರೇಶ ಹೆಬ್ಬಾರ್, ಎಸ್.ಡಿ.ಎಂ ಐ.ಟಿ.ಐ ವೇಣೂರು ಕಾಲೇಜಿನ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್, ಪತ್ರಕರ್ತೆ ಶ್ರೇಯಾ ಶೆಟ್ಟಿ, ಪತ್ರಕರ್ತ ನಿಶಾನ್ ಬಂಗೇರ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯವಾದ ಕುಮಾರ್ ಉಪಸ್ಥಿತರಿದ್ದರು.

ಆರಂಭದ ವಿದ್ಯಾರ್ಥಿನಿಯರಾದ ರೂಪಾ ಶೆಟ್ಟಿ ಇವರು ಅಂದು ಇದ್ದ ಹಾಗೂ ಇಂದು ಇರುವ ಸಂಸ್ಥೆಯ ಎಲ್ಲಾ ಸೌಕರ್ಯ, ಶಿಕ್ಷಣ ನೀಡುವ ಪದ್ದತಿ ಉದ್ಯೋಗದ ಅವಕಾಶ ಮುಂತಾದ ವಿಷಯದ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಹಿರಿಯ ವಿದ್ಯಾರ್ಥಿನಿ ಶಶಿಪ್ರಭ ಶುಭ ಹಾರೈಸಿದರು.

ಸಂಸ್ಥೆಯ ಪ್ರಾಚಾರ್ಯ ಪ್ರಕಾಶ್ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕ್ಷಮಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಂದ್ಯಾ ಧನ್ಯವಾದವಿತ್ತರು.
ಇದೇ ಸಂದರ್ಭದಲ್ಲಿ ಮಳೆಗಾಲದ ತಿನಿಸುಗಳು ಎಂಬ ಶೀರ್ಷಿಕೆಯ ಅಡಿಯಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ತಮ್ಮ ತಮ್ಮ ಮನೆಯಿಂದ ವಿವಿಧ ಬಗೆಯ ಹಲಸಿನ, ಮಾವಿನ ತಿಂಡಿ ತಿನಿಸುಗಳು, ಹಲವು ಬಗೆಯ ಪದಾರ್ಥಗಳು, ಸಿಹಿ ತಿನಿಸುಗಳನ್ನು ಮಾಡಿಕೊಂಡು ಬಂದಿದ್ದು ಎಲ್ಲರೂ ಸೇರಿ ಹಂಚಿ ತಿನ್ನುವ ಮೂಲಕ ನಾವೆಲ್ಲಾ ಒಂದೇ ಕುಟುಂಬದ ಸದಸ್ಯರು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.













