ಉಜಿರೆ: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದಿಂದ ನಡೆಸಲ್ಪಡುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಷನ್ ಅಂಡ್ ರಿಸರ್ಚ್ ಇವರು ಜೂನ್ ತಿಂಗಳಿನಲ್ಲಿ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಹರಿಕೃಷ್ಣ ಇವರು ರಾಷ್ಟ್ರ ಮಟ್ಟದಲ್ಲಿ 1327ರಾಂಕ್ ಅನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.
ಹರಿಕೃಷ್ಣ ಅವರ ಅಧ್ಬುತ ಸಾಧನೆಯಿಂದ ನಮ್ಮ ಕಾಲೇಜಿನ ಘನತೆಗೆ ಮತ್ತೊಂದು ಗರಿ ಸೇರಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳು ಎಂದರೆ ಕೇವಲ CET ಅಥವಾ NEET ಮಾತ್ರ ಎಂಬ ಭ್ರಮೆಯನ್ನು ಹೋಗಲಾಡಿಸುವಂತಿದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಿಧ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೂ ಉನ್ನತ ಶಿಕ್ಷಣದ ಅವಕಾಶಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ಮತ್ತು ಮುಂದಿನ ವಿದ್ಯಾರ್ಥಿಗಳಿಗೆ ಈ ಸಾಧನೆ ಸ್ಪೂರ್ತಿದಾಯಕವಾಗಿದೆ ಎಂದು ಎಸ್ ಡಿ ಎಂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಪ್ರಮೋದ್ ಕುಮಾರ್ ಬಿ, ತಿಳಿಸಿದರು.
ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾದ ನಂತರ ನನಗೆ ವಿಶೇಷ ಅನುಭವಗಳು ದೊರೆತವು. ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ವಿದ್ಯಾಭ್ಯಾಸ ನೀಡುತ್ತಿದ್ದು, ವಿದ್ಯಾರ್ಥಿ ವೇತನದ ಮೂಲಕ ಓದಲು ಉತ್ಸಾಹ ಇರುವ ಹಲವಾರು ಬಡ ಕುಟುಂಬದ ಮಕ್ಕಳಿಗೆ ಆರ್ಥಿಕ ನೆರವು ಮತ್ತು ಪ್ರೋತ್ಸಾಹ ನೀಡುತ್ತಾ ಬಂದಿದ್ದೀರಿ. ನೀವು ನೀಡಿರುವ ಸಂಸ್ಕಾರ ಜೀವನ ಪರ್ಯಂತ ಜೊತೆಗಿರುತ್ತದೆ. ನೀವು ನೀಡಿದ ಸವಲತ್ತುಗಳು ನನ್ನ ಭವಿಷ್ಯದ ಮೆಟ್ಟಿಲುಗಳು. ಶಿಕ್ಷಕ ವೃಂದದ ಆಶಯ, ಪ್ರೋತ್ಸಾಹ, ತ್ಯಾಗ, ಆಶೀರ್ವಾದ, ಸಹಕಾರಕ್ಕೆ ನನ್ನ ಅನಂತಾನಂತ ಧನ್ಯವಾದಗಳು. ಎಂದು ಸಾಧಕ ವಿದ್ಯಾರ್ಥಿ ಹರಿಕೃಷ್ಣ ಅಭಿಪ್ರಾಯ ಪಟ್ಟರು.
ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಹಾಗೂ ಶಿಕ್ಷಕ ವೃಂದ ಅಭಿನಂದಿಸಿರುತ್ತಾರೆ.













