23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

ಮುಂಡಾಜೆ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಡಾಜೆ ಇಲ್ಲಿ ಜೂ.30 ರಂದು ಯಕ್ಷ ಧ್ರುವ ಪಟ್ಲ ಪೌಂಡೇಶನ್ (ರಿ) ವತಿಯಿಂದ ಯಕ್ಷಗಾನ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿ ಗಳಾದ ಸಾತ್ವಿಕ್ ಪಿ ಹಾಗೂ ಡಿ ವಿಜಿತ್ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮಂತ್ರಿಮಂಡಲದ ನಾಯಕನಾದ ಜಶ್ವಿನ್ ಬಿ ಎಸ್ ವಹಿಸಿಕೊಂಡಿದ್ದರು. ಯಕ್ಷದ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಯಕ್ಷದ್ರುವ ಪಟ್ಲ ಪೌಂಡೇಶನ್ (ರಿ)ಬೆಳ್ತಂಗಡಿ ಘಟಕ ಇದರ ಕಾರ್ಯದರ್ಶಿ ಶೃತಿ ಕಂಠ ಭಟ್ ಯಕ್ಷಗಾನ ಕಲಿಕೆ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ , ಶಾಲಾ ಪ್ರಾಂಶುಪಾಲರಾದ ಮುರಳಿಧರ್ ಜಿ ಎನ್ , ಕಂಪ್ಯೂಟರ್ ಶಿಕ್ಷಕಿ ಹಾಗೂ ನಿಲಯಪಾಲಕಿಯಾದ ರೋಹಿಣಿ ಆರ್ ಜಿ ,ಯಕ್ಷಗಾನ ತರಗತಿಯ ಶಾಲಾ ಸಂಚಾಲಕರಾದ ಸುರಕ್ಷಾ ಉಪಸ್ಥಿತರಿದ್ದರು . ಕಾರ್ಯಕ್ರಮವನ್ನು ಹತ್ತನೇ ತರಗತಿಯ ತನ್ವಿತ್ ಸ್ವಾಗತಿಸಿದರು , ಉಲ್ಲಾಸ್ ವಂದಿಸಿದರು, ತನ್ವಿತ್ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya
error: Content is protected !!