25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕರಾಗಿ ಸುಮಾರು 18 ವರ್ಷಗಳಿಂದ ಸೇವೆ ಸಲ್ಲಿಸಿದರ ಮನೋಹರ ಶೆಟ್ಟಿಯವರನ್ನು ವಯೋನಿವೃತ್ತಿಯ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಅವರು ಸನ್ಮಾನಿಸಿ ‘ ಮನೋಹರ್ ಅವರು ಕೇವಲ ಗ್ರಂಥಪಾಲಕರಾಗದೆ ವಿದ್ಯಾರ್ಥಿಗಳಿಗೆ ಅನೇಕ ವೃತ್ತಿಪರ ಅಧ್ಯಯನ ಮಾಹಿತಿ ಹಾಗೂ ಮಾರ್ಗದರ್ಶನ ನೀಡುತ್ತಿದ್ದರು. ಅವರಲ್ಲಿ ಪುಸ್ತಕ ಪ್ರೀತಿ ಜೊತೆಗೆ ಬರಹಗಾರರಾಗಿಯು ಗುರುತಿಸಿಕೊಂಡಿದ್ದಾರೆ ‘ ಎಂದು ಹೇಳಿ ಶುಭಕೋರಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮನೋಹರ ಶೆಟ್ಟಿಯವರು ‘ ಅನೇಕ ವರ್ಷಗಳ ಪುಸ್ತಕಗಳೊಂದಿಗೆ ಒಡನಾಡಿಯಾಗಿ ಅಲ್ಲದೇ ಅನೇಕ ವಿದ್ಯಾರ್ಥಿಗಳಿಗೆ ವೃತ್ತಿಪರ ಅಧ್ಯಯನ , ಮಾರ್ಗದರ್ಶನ ನೀಡಿದ ಸಾರ್ಥಕತೆ ಇದೆ. ಹೆಚ್ಚಿನದಾಗಿ ವಿದ್ಯಾರ್ಥಿಗಳ ಪ್ರೀತಿಗಳಿಸಿದ್ದೇನೆ. ಅಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆಯವರ ಕಾರ್ಯತತ್ಪರತೆಯೇ ನನಗೆ ಆದರ್ಶ. ಅವರಿಗೂ ಹಾಗೂ ಸೇವೆಗೆ ಅವಕಾಶ ಒದಗಿಸಿದ ಆಡಳಿತ ಮಂಡಳಿಯ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ‘ ಎಂದು ನುಡಿದರು.

ಮನೋಹರ ಶೆಟ್ಟಿಯವರ ಜೀವನಾದರ್ಶಗಳ ಬಗ್ಗೆ ಹಿಂದಿ ಭಾಷಾ ವಿಭಾಗದ ಮುಖ್ಯಸ್ಥರಾದ ನಾಗರಾಜ್ ಭಂಡಾರಿ ಹಾಗೂ ಗ್ರಂಥಾಲಯ ಸಿಬ್ಬಂದಿ ಹರೀಶ್ ಕುಲಾಲ್ ಇವರು ಅನಿಸಿಕೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ. ಉಪಸ್ಥಿತರಿದ್ದರು. ಉಪನ್ಯಾಸಕರ ಸಂಘದ ಕಾರ್ಯದರ್ಶಿ ಸೀಮಾ ಸ್ವಾಗತಿಸಿ , ಸಹ ಕಾರ್ಯದರ್ಶಿ ಅಂಕಿತಾ ಎಂ. ಕೆ ನಿರೂಪಿಸಿ ವಂದಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!