July 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕರಾಗಿ ಸುಮಾರು 18 ವರ್ಷಗಳಿಂದ ಸೇವೆ ಸಲ್ಲಿಸಿದರ ಮನೋಹರ ಶೆಟ್ಟಿಯವರನ್ನು ವಯೋನಿವೃತ್ತಿಯ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಅವರು ಸನ್ಮಾನಿಸಿ ‘ ಮನೋಹರ್ ಅವರು ಕೇವಲ ಗ್ರಂಥಪಾಲಕರಾಗದೆ ವಿದ್ಯಾರ್ಥಿಗಳಿಗೆ ಅನೇಕ ವೃತ್ತಿಪರ ಅಧ್ಯಯನ ಮಾಹಿತಿ ಹಾಗೂ ಮಾರ್ಗದರ್ಶನ ನೀಡುತ್ತಿದ್ದರು. ಅವರಲ್ಲಿ ಪುಸ್ತಕ ಪ್ರೀತಿ ಜೊತೆಗೆ ಬರಹಗಾರರಾಗಿಯು ಗುರುತಿಸಿಕೊಂಡಿದ್ದಾರೆ ‘ ಎಂದು ಹೇಳಿ ಶುಭಕೋರಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮನೋಹರ ಶೆಟ್ಟಿಯವರು ‘ ಅನೇಕ ವರ್ಷಗಳ ಪುಸ್ತಕಗಳೊಂದಿಗೆ ಒಡನಾಡಿಯಾಗಿ ಅಲ್ಲದೇ ಅನೇಕ ವಿದ್ಯಾರ್ಥಿಗಳಿಗೆ ವೃತ್ತಿಪರ ಅಧ್ಯಯನ , ಮಾರ್ಗದರ್ಶನ ನೀಡಿದ ಸಾರ್ಥಕತೆ ಇದೆ. ಹೆಚ್ಚಿನದಾಗಿ ವಿದ್ಯಾರ್ಥಿಗಳ ಪ್ರೀತಿಗಳಿಸಿದ್ದೇನೆ. ಅಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆಯವರ ಕಾರ್ಯತತ್ಪರತೆಯೇ ನನಗೆ ಆದರ್ಶ. ಅವರಿಗೂ ಹಾಗೂ ಸೇವೆಗೆ ಅವಕಾಶ ಒದಗಿಸಿದ ಆಡಳಿತ ಮಂಡಳಿಯ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ‘ ಎಂದು ನುಡಿದರು.

ಮನೋಹರ ಶೆಟ್ಟಿಯವರ ಜೀವನಾದರ್ಶಗಳ ಬಗ್ಗೆ ಹಿಂದಿ ಭಾಷಾ ವಿಭಾಗದ ಮುಖ್ಯಸ್ಥರಾದ ನಾಗರಾಜ್ ಭಂಡಾರಿ ಹಾಗೂ ಗ್ರಂಥಾಲಯ ಸಿಬ್ಬಂದಿ ಹರೀಶ್ ಕುಲಾಲ್ ಇವರು ಅನಿಸಿಕೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ. ಉಪಸ್ಥಿತರಿದ್ದರು. ಉಪನ್ಯಾಸಕರ ಸಂಘದ ಕಾರ್ಯದರ್ಶಿ ಸೀಮಾ ಸ್ವಾಗತಿಸಿ , ಸಹ ಕಾರ್ಯದರ್ಶಿ ಅಂಕಿತಾ ಎಂ. ಕೆ ನಿರೂಪಿಸಿ ವಂದಿಸಿದರು.

Related posts

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya
error: Content is protected !!