July 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ:ಎಸ್.ಡಿ.ಎಂ ಮಹಿಳಾ ಐ.ಟಿ.ಐ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ

ಉಜಿರೆ: ಎಸ್.ಡಿ.ಎಂ ಮಹಿಳಾ ಐ.ಟಿ.ಐ ಉಜಿರೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಡಿಪ್ಲೋಮಾ ಕಾಲೇಜಿನ ಉಪ ಪ್ರಾಂಶುಪಾಲರಾದ ಅಮರೇಶ ಹೆಬ್ಬಾರ್, ಎಸ್.ಡಿ.ಎಂ ಐ.ಟಿ.ಐ ವೇಣೂರು ಕಾಲೇಜಿನ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್, ಪತ್ರಕರ್ತೆ ಶ್ರೇಯಾ ಶೆಟ್ಟಿ, ಪತ್ರಕರ್ತ ನಿಶಾನ್ ಬಂಗೇರ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯವಾದ ಕುಮಾರ್ ಉಪಸ್ಥಿತರಿದ್ದರು.

ಆರಂಭದ ವಿದ್ಯಾರ್ಥಿನಿಯರಾದ ರೂಪಾ ಶೆಟ್ಟಿ ಇವರು ಅಂದು ಇದ್ದ ಹಾಗೂ ಇಂದು ಇರುವ ಸಂಸ್ಥೆಯ ಎಲ್ಲಾ ಸೌಕರ್ಯ, ಶಿಕ್ಷಣ ನೀಡುವ ಪದ್ದತಿ ಉದ್ಯೋಗದ ಅವಕಾಶ ಮುಂತಾದ ವಿಷಯದ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಹಿರಿಯ ವಿದ್ಯಾರ್ಥಿನಿ ಶಶಿಪ್ರಭ ಶುಭ ಹಾರೈಸಿದರು.

ಸಂಸ್ಥೆಯ ಪ್ರಾಚಾರ್ಯ ಪ್ರಕಾಶ್ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕ್ಷಮಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಂದ್ಯಾ ಧನ್ಯವಾದವಿತ್ತರು.

ಇದೇ ಸಂದರ್ಭದಲ್ಲಿ ಮಳೆಗಾಲದ ತಿನಿಸುಗಳು ಎಂಬ ಶೀರ್ಷಿಕೆಯ ಅಡಿಯಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ತಮ್ಮ ತಮ್ಮ ಮನೆಯಿಂದ ವಿವಿಧ ಬಗೆಯ ಹಲಸಿನ, ಮಾವಿನ ತಿಂಡಿ ತಿನಿಸುಗಳು, ಹಲವು ಬಗೆಯ ಪದಾರ್ಥಗಳು, ಸಿಹಿ ತಿನಿಸುಗಳನ್ನು ಮಾಡಿಕೊಂಡು ಬಂದಿದ್ದು ಎಲ್ಲರೂ ಸೇರಿ ಹಂಚಿ ತಿನ್ನುವ ಮೂಲಕ ನಾವೆಲ್ಲಾ ಒಂದೇ ಕುಟುಂಬದ ಸದಸ್ಯರು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!