23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ:ಎಸ್.ಡಿ.ಎಂ ಮಹಿಳಾ ಐ.ಟಿ.ಐ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ

ಉಜಿರೆ: ಎಸ್.ಡಿ.ಎಂ ಮಹಿಳಾ ಐ.ಟಿ.ಐ ಉಜಿರೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಡಿಪ್ಲೋಮಾ ಕಾಲೇಜಿನ ಉಪ ಪ್ರಾಂಶುಪಾಲರಾದ ಅಮರೇಶ ಹೆಬ್ಬಾರ್, ಎಸ್.ಡಿ.ಎಂ ಐ.ಟಿ.ಐ ವೇಣೂರು ಕಾಲೇಜಿನ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್, ಪತ್ರಕರ್ತೆ ಶ್ರೇಯಾ ಶೆಟ್ಟಿ, ಪತ್ರಕರ್ತ ನಿಶಾನ್ ಬಂಗೇರ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯವಾದ ಕುಮಾರ್ ಉಪಸ್ಥಿತರಿದ್ದರು.

ಆರಂಭದ ವಿದ್ಯಾರ್ಥಿನಿಯರಾದ ರೂಪಾ ಶೆಟ್ಟಿ ಇವರು ಅಂದು ಇದ್ದ ಹಾಗೂ ಇಂದು ಇರುವ ಸಂಸ್ಥೆಯ ಎಲ್ಲಾ ಸೌಕರ್ಯ, ಶಿಕ್ಷಣ ನೀಡುವ ಪದ್ದತಿ ಉದ್ಯೋಗದ ಅವಕಾಶ ಮುಂತಾದ ವಿಷಯದ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಹಿರಿಯ ವಿದ್ಯಾರ್ಥಿನಿ ಶಶಿಪ್ರಭ ಶುಭ ಹಾರೈಸಿದರು.

ಸಂಸ್ಥೆಯ ಪ್ರಾಚಾರ್ಯ ಪ್ರಕಾಶ್ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕ್ಷಮಾ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಂದ್ಯಾ ಧನ್ಯವಾದವಿತ್ತರು.

ಇದೇ ಸಂದರ್ಭದಲ್ಲಿ ಮಳೆಗಾಲದ ತಿನಿಸುಗಳು ಎಂಬ ಶೀರ್ಷಿಕೆಯ ಅಡಿಯಲ್ಲಿ ಹೆಚ್ಚಿನ ವಿದ್ಯಾರ್ಥಿನಿಯರು ತಮ್ಮ ತಮ್ಮ ಮನೆಯಿಂದ ವಿವಿಧ ಬಗೆಯ ಹಲಸಿನ, ಮಾವಿನ ತಿಂಡಿ ತಿನಿಸುಗಳು, ಹಲವು ಬಗೆಯ ಪದಾರ್ಥಗಳು, ಸಿಹಿ ತಿನಿಸುಗಳನ್ನು ಮಾಡಿಕೊಂಡು ಬಂದಿದ್ದು ಎಲ್ಲರೂ ಸೇರಿ ಹಂಚಿ ತಿನ್ನುವ ಮೂಲಕ ನಾವೆಲ್ಲಾ ಒಂದೇ ಕುಟುಂಬದ ಸದಸ್ಯರು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!