22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಸಿಎ ದಿನಾಚರಣೆ

ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ 2026–27ನೇ ಶೈಕ್ಷಣಿಕ ವರ್ಷದ ವಾಣಿಜ್ಯ ಸಂಘದ ಉದ್ಘಾಟನೆ ಹಾಗೂ ಸಿಎ ದಿನಾಚರಣೆಯನ್ನು ಜುಲೈ 1ರಂದು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿಯಾದ ಸಿಎ ಅರ್ಜುನ್ ಶೆಣೈ ಭಾಗವಹಿಸಿ ಮಾತನಾಡಿದರು. ಅವರು ಚಾರ್ಟರ್ಡ್ ಅಕೌಂಟೆನ್ಸಿ (ಸಿಎ) ವೃತ್ತಿಯಲ್ಲಿ ಇರುವ ಅಪಾರ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ದೃಢ ಸಂಕಲ್ಪ ಹಾಗೂ ಪರಿಶ್ರಮದಿಂದ ತಮ್ಮ ಗುರಿಯನ್ನು ಸಾಧಿಸುವಂತೆ ಕರೆ ನೀಡಿದರು. ಕಾಲೇಜಿನಲ್ಲಿ ಆಯೋಜಿಸುವ ಶೈಕ್ಷಣಿಕ, ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಆತ್ಮವಿಶ್ವಾಸ, ನಾಯಕತ್ವ ಗುಣಗಳು ಹಾಗೂ ಭವಿಷ್ಯದ ಯಶಸ್ಸಿಗೆ ಅಗತ್ಯವಾದ ಭದ್ರ ಬುನಾದಿ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು. ಅಲ್ಲದೆ, ಪದವಿಪೂರ್ವ ಶಿಕ್ಷಣವೇ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳಿಗೆ ಭದ್ರ ಅಡಿಪಾಯವಾಗಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪ್ರಮೋದ್ ಕುಮಾರ್ ವಾಣಿಜ್ಯ ಸಂಘದ ಉದ್ಘಾಟನೆಗೆ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಕಾಲೇಜು ಒದಗಿಸುವ ಎಲ್ಲ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ಸಾಧನೆ ಮಾಡುವಂತೆ ಪ್ರೇರೇಪಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿಯಾಗಿ ಗಮನಾರ್ಹ ಸಾಧನೆ ಮಾಡಿರುವ ಸಿಎ ಅರ್ಜುನ್ ಶೆಣೈ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಚರಿತ್ರಾ ನಿರೂಪಿಸಿದರು. ವಾಣಿಜ್ಯ ಸಂಘದ ಸಂಯೋಜಕರಾದ ಪ್ರಭಾವತಿ ಕಾರ್ಯಕ್ರಮದ ಆಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಬೇಬಿ ಎನ್ ಹಾಗೂ ಉಪನ್ಯಾಸಕರಾದ ಸವಿತಾ, ಶೋಭಾ ಮತ್ತು ಅಶ್ವಿನಿ ಉಪಸ್ಥಿತರಿದ್ದರು. ವಾಣಿಜ್ಯ ಸಂಘದ ಕಾರ್ಯದರ್ಶಿ ಸುಹಾನ್ ವಂದನಾರ್ಪಣೆ ಸಲ್ಲಿಸಿದರು.

Related posts

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಫುಟ್ ಬಾಲ್ ಪಂದ್ಯಾಟ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya
error: Content is protected !!