July 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

ಕಕ್ಕಿಂಜೆ : “ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಕೆ ಎಂ ಸಿ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗ-ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಹಾಗೂ
ಇಂಟರ್ ನ್ಯಾಷನಲ್ ಪವರ್ ಕಾರ್ಪೊರೇಷನ್ ಪ್ರೈ.ಲಿ. ಚಾರ್ಮಾಡಿ – ಅಣಿಯೂರು ಇವರ ಸಂಯುಕ್ತ ಆಶ್ರಯದಲ್ಲಿ. ಕೆಎಂಸಿ ತುರ್ತು ಚಿಕಿತ್ಸಾ ವಿಭಾಗ – ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇವರ ಸಹಕಾರದೊಂದಿಗೆ, “ಪ್ರಥಮ ಚಿಕಿತ್ಸೆ (First Aid,Basic Life Support) ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರವು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ನಡೆಯಿತು.

ಕಾರ್ಯಗಾರದಲ್ಲಿ ಇಂಟರ್ ನ್ಯಾಷನಲ್ ಪವರ್ ಕಾರ್ಪೊರೇಷನ್ ಪ್ರೈ .ಲಿ. ಚಾರ್ಮಾಡಿ – ಅಣಿಯೂರು ಇದರ ಸಿಬ್ಬಂದಿಗಳು ಪಾಲ್ಗೊಂಡಿದ್ದರು, ಕೆಎಂಸಿ ತುರ್ತು ಚಿಕಿತ್ಸಾ ವಿಭಾಗದ ಸಿಬ್ಬಂದಿ ಗುರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯ ವೈದ್ಯಕೀಯ ನಿರ್ದೇಶಕ ಡಾ‌.ಮುರಳಿಕೃಷ್ಣ ಇರ್ವತ್ರಾಯ ಮಾತನಾಡಿ ತುರ್ತು ಸಂದರ್ಭಗಳಲ್ಲಿ ಹಾಗೂ ಇನ್ನಿತರ ಆನಾರೋಗ್ಯದ ಅಥವಾ ಅನಾಹುತಗಳು ಸಂಭವಿಸುವ ಸಮಯದಲ್ಲಿ ಜೀವ ಉಳಿಸಲು ದೈರ್ಯ ಮಾಡಬೇಕು, ಹಾಗೂ ಎದೆಗುಂದದೆ ಪ್ರಥಮ ಚಿಕಿತ್ಸೆ ನೀಡಬೇಕು, ಹೃದಯಾಘಾತ, ಪಾರ್ಶ್ವವಾಯು, ನೀರಿನಲ್ಲಿ ಮುಳುಗುವುದು, ಅಗ್ನಿ ಅವಘಡ ಹಾಗೂ ಅಪಘಾತಗಳು/ಆಘಾತ, ಹಾವು ಕಡಿತ, ನಾಯಿ ಕಡಿತ, ವಿದ್ಯುತ್ ಆಘಾತ ಮತ್ತು ಸುಟ್ಟಗಾಯಗಳು, ಸಿಡಿಲು/ಮಿಂಚು,ರಕ್ತಸ್ರಾವದ ಗಾಯಗಳು ಮುಂತಾದ ಸಂದರ್ಭಗಳಲ್ಲಿ ಪ್ರತಿಯೊಬ್ಬ ಏನು ಮಾಡಬೇಕು ಮತ್ತು ಏನು ತಪ್ಪು ಮಾಡಬಾರದು ಎಂಬುದರ ಬಗ್ಗೆ ಇನ್ನಿತರ ತುರ್ತು ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು. ಹೃದಯ ಸ್ತಂಭನ ಸಂದರ್ಭದಲ್ಲಿ CPR ಕೊಡುವುದರ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿಯನ್ನು ನಡೆಸಿಕೊಟ್ಟರು.

ವೈದ್ಯಕೀಯ ತುರ್ತು ಪರಿಸ್ಥಿತಿಗಳು ಮತ್ತು ವಿಪತ್ತುಗಳು ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ರೋಗಿಗಳನ್ನು ಅಥವಾ ಸಂತ್ರಸ್ತರನ್ನು ನಿಭಾಯಿಸಲು ಕನಿಷ್ಠ ಮೂಲಭೂತ ಜ್ಞಾನ ಅತ್ಯಗತ್ಯ, ಜೀವ ಉಳಿಸಲು ವೈದ್ಯರೇ ಆಗಬೇಕೆಂದಿಲ್ಲ ಸಾಮಾಜಿಕ ಕಳಕಳಿ ಇರುವವರು ಯಾರು ಬೇಕಾದರೂ ಈ ಕಾರ್ಯವನ್ನು ಮಾಡಬಹುದು ಎಂದರು.


ಈ ಸಂದರ್ಭದಲ್ಲಿ ಕೆ ಎಂ ಸಿ ತುರ್ತು ಚಿಕಿತ್ಸಾ ವಿಭಾಗದ ವೈದ್ಯಾಧಿಕಾರಿ ಡಾ.ದೆವಯಾನಿ , ಇಂಟರ್ ನ್ಯಾಷನಲ್ ಪವರ್ ಕಾರ್ಪೊರೇಷನ್ ಪ್ರೈ.ಲಿ. ಚಾರ್ಮಾಡಿ – ಅಣಿಯೂರು,ಇದರ ಸಿನಿಯರ್ ಡಿಜಿಎಮ್ ಅಮ್ರತೇಶ್ ಎಂ ಅರಿಗ ,ಸಿನಿಯರ್ ಎಂಜಿನಿಯರ್ ಮಹೇಶ್ ರಾವ್, ಸಿನಿಯರ್ ಎಂಜಿನಿಯರ್ ವಿಶ್ವನಾಥ್, ಅಕೌಂಟ್ಸ್ ಆಫೀಸರ್ ಯಜ್ಞೇಶ್ ಭಟ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕೆಎಂಸಿ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗದ ಪಿ ಆರ್ ಓ ಸುಪ್ರೀತಾ ಸಹಕರಿಸಿದರು.

Related posts

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಉಜಿರೆ ನಿವಾಸಿ ಲಲಿತಾ ಪೂಜಾರಿ ನಿಧನ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya
error: Content is protected !!