July 3, 2026
Uncategorized

ಲಾಯಿಲ ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ ಕಸ ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾಮ ಪಂಚಾಯತ್ ಕಾರ್ಯಕ್ಕೆ ಮೆಚ್ಚುಗೆ:

ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನದಿ ಸೇರಿದಂತೆ ಹಳ್ಳ , ತೋಡುಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.ಲಾಯಿಲ

ಗ್ರಾಮದ ಪಡ್ಲಾಡಿ ಸಮೀಪ ಹರಿಯುತ್ತಿರುವ ಸೋಮವತಿ ಉಪನದಿಯಲ್ಲಿ ಇರುವ ಕಿಂಡಿ ಅಣೆಕಟ್ಟಿನಲ್ಲಿ ಮರ ಕಸ ಕಡ್ಡಿಗಳು ಸಿಲುಕಿ ನೀರು ಸರಾಗವಾಗಿ ಹರಿಯಲು ಸಮಸ್ಯೆಯಾಗಿ ಪಕ್ಕದ ಕೃಷಿ ಪ್ರದೇಶಗಳಿಗೆ ನೀರು ನುಗ್ಗುವ ಸಂಭವ ಇದ್ದು ಈ ಬಗ್ಗೆ ಸ್ಥಳೀಯರು ಮಾಜಿ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಗಮನಕ್ಕೆ ತಂದಾಗ ಅವರು ಲಾಯಿಲ ಗ್ರಾಮ ಪಂಚಾಯತ್ ಗೆ ಈ ಬಗ್ಗೆ

ಮಾಹಿತಿ ನೀಡಿ ತಕ್ಷಣ ತೆರವುಗೊಳಿಸುವ ಬಗ್ಗೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದು, ಈ ಬಗ್ಗೆ ಪಂಚಾಯತ್ ಅಧಿಕಾರಿಗಳು ಸ್ಪಂದಿಸಿ ಪಂಚಾಯತ್ ವತಿಯಿಂದ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಮರ ಸೇರಿದಂತೆ ಇನ್ನಿತರ ಕಸ ಕಡ್ಡಿಗಳನ್ಬು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿದ್ದಾರೆ. ಮನವಿಗೆ ಸ್ಪಂದಿಸಿದ ಪ್ರಸಾದ್ ಶೆಟ್ಟಿ ಹಾಗೂ ಪಂಚಾಯತ್ ಅಧಿಕಾರಿಗಳ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya
error: Content is protected !!