23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕರಾಗಿ ಸುಮಾರು 18 ವರ್ಷಗಳಿಂದ ಸೇವೆ ಸಲ್ಲಿಸಿದರ ಮನೋಹರ ಶೆಟ್ಟಿಯವರನ್ನು ವಯೋನಿವೃತ್ತಿಯ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಅವರು ಸನ್ಮಾನಿಸಿ ‘ ಮನೋಹರ್ ಅವರು ಕೇವಲ ಗ್ರಂಥಪಾಲಕರಾಗದೆ ವಿದ್ಯಾರ್ಥಿಗಳಿಗೆ ಅನೇಕ ವೃತ್ತಿಪರ ಅಧ್ಯಯನ ಮಾಹಿತಿ ಹಾಗೂ ಮಾರ್ಗದರ್ಶನ ನೀಡುತ್ತಿದ್ದರು. ಅವರಲ್ಲಿ ಪುಸ್ತಕ ಪ್ರೀತಿ ಜೊತೆಗೆ ಬರಹಗಾರರಾಗಿಯು ಗುರುತಿಸಿಕೊಂಡಿದ್ದಾರೆ ‘ ಎಂದು ಹೇಳಿ ಶುಭಕೋರಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮನೋಹರ ಶೆಟ್ಟಿಯವರು ‘ ಅನೇಕ ವರ್ಷಗಳ ಪುಸ್ತಕಗಳೊಂದಿಗೆ ಒಡನಾಡಿಯಾಗಿ ಅಲ್ಲದೇ ಅನೇಕ ವಿದ್ಯಾರ್ಥಿಗಳಿಗೆ ವೃತ್ತಿಪರ ಅಧ್ಯಯನ , ಮಾರ್ಗದರ್ಶನ ನೀಡಿದ ಸಾರ್ಥಕತೆ ಇದೆ. ಹೆಚ್ಚಿನದಾಗಿ ವಿದ್ಯಾರ್ಥಿಗಳ ಪ್ರೀತಿಗಳಿಸಿದ್ದೇನೆ. ಅಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆಯವರ ಕಾರ್ಯತತ್ಪರತೆಯೇ ನನಗೆ ಆದರ್ಶ. ಅವರಿಗೂ ಹಾಗೂ ಸೇವೆಗೆ ಅವಕಾಶ ಒದಗಿಸಿದ ಆಡಳಿತ ಮಂಡಳಿಯ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ‘ ಎಂದು ನುಡಿದರು.

ಮನೋಹರ ಶೆಟ್ಟಿಯವರ ಜೀವನಾದರ್ಶಗಳ ಬಗ್ಗೆ ಹಿಂದಿ ಭಾಷಾ ವಿಭಾಗದ ಮುಖ್ಯಸ್ಥರಾದ ನಾಗರಾಜ್ ಭಂಡಾರಿ ಹಾಗೂ ಗ್ರಂಥಾಲಯ ಸಿಬ್ಬಂದಿ ಹರೀಶ್ ಕುಲಾಲ್ ಇವರು ಅನಿಸಿಕೆ ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ. ಉಪಸ್ಥಿತರಿದ್ದರು. ಉಪನ್ಯಾಸಕರ ಸಂಘದ ಕಾರ್ಯದರ್ಶಿ ಸೀಮಾ ಸ್ವಾಗತಿಸಿ , ಸಹ ಕಾರ್ಯದರ್ಶಿ ಅಂಕಿತಾ ಎಂ. ಕೆ ನಿರೂಪಿಸಿ ವಂದಿಸಿದರು.

Related posts

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya
error: Content is protected !!