July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

ಮುಂಡಾಜೆ: ನೇಷನ್ ಬಿಲ್ಡರ್ಸ್ ಎಂಬ ಹೆಸರಿನಲ್ಲಿ ಸಂಚಲನವನ್ನು ಮೂಡಿಸಿದ ಸತ್ಯನಾರಾಯಣ ಹೊಳ್ಳ ಮುಂಡಾಜೆ ಇವರು ನೇಷನ್ ಬಿಲ್ಡರ್ಸ್ ಎಂಬ ಹೆಸರಿನ ಕೊಡೆಗಳನ್ನು ಮುಂಡಾಜೆ ಸ .ಉ . ಪ್ರಾ . ಶಾಲೆಯ ಮಕ್ಕಳಿಗೆ ಹಾಗೂ ಶಿಕ್ಷಕರಿಗೂ ವಿತರಿಸುವ ಮೂಲಕ ಮಕ್ಕಳು ದೇಶವನ್ನು ಕಟ್ಟುವವರಾಗಬೇಕು ಎಂಬ ಸಂದೇಶವನ್ನು ಸಾರಿದ್ದಾರೆ .

ಮಕ್ಕಳ ಮೇಲಿನ ಅತೀವ ಪ್ರೀತಿಯಿಂದ ಶಾಲೆ ಪ್ರಾರಂಭಕ್ಕೆ ಮುನ್ನವೇ ಕೊಡೆ ವಿತರಣೆ ಮಾಡಿದ್ದಾರೆ. ಯಾವುದೇ ಮಕ್ಕಳು ಮಳೆಯಲ್ಲಿ ನೆನೆಯುವುದು ಕಂಡರು ಅವರಿಗೆ ಕೊಡೆಯನ್ನು ನೀಡುವಂತೆ ಹೇಳಿ ಹೆಚ್ಚುವರಿ ಕೊಡೆಗಳನ್ನು ನೀಡಿದ್ದಾರೆ. ಸತ್ಯನಾರಾಯಣ ಹೊಳ್ಳ ರವರು ಮೊದಲಿನಿಂದಲೂ ಹಲವಾರು ಕೊಡುಗೆಗಳನ್ನು ಮುಂಡಾಜೆ ಸರ್ಕಾರಿ ಶಾಲೆಗೆ ನೀಡುತ್ತ ಬಂದಿದ್ದಾರೆ. ಇವರ ಕಾರ್ಯ ವೈಖರಿಗೆ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಕ್ಷರು, ಸದಸ್ಯರು ಸಹಶಿಕ್ಷಕರು ಪೋಷಕರು, ಹಾಗೂ ಮಕ್ಕಳ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದರು.

Related posts

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಆಶ್ರಯದಲ್ಲಿ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya
error: Content is protected !!