ಬೆಳ್ತಂಗಡಿ: ಜು.2 ರಂದು ಬೆಳ್ತಂಗಡಿ ಡಾ. ಬಿ.ನಾರಾಯಣ ರಾವ್ ಸಭಾಭವನದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಹಾಲು ಉತ್ಪಾದಕರ ಕಾರ್ಯದರ್ಶಿಯವರ ಮಾಸಿಕ ತಿಂಗಳ ಸಭೆಯಲ್ಲಿ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಡಾ. ಸಾವಿತ್ರಿ ರೈ ಕೆ ಇವರಿಗೆ ಅತ್ಯುತ್ತಮ ಸಹಕಾರಿ ಮಹಿಳಾ ಸಾಧಕಿ, ರಾಷ್ಟ್ರೀಯ ಕಲಾ ಸೇವಾ ರತ್ನ ಮತ್ತು ರಾಷ್ಟ್ರೀಯ ವೀರ ವನಿತೆ, ಸಹಕಾರಿ ಕ್ಷೇತ್ರ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿರುವ ಅಗಣಿತ ಸೇವೆಯನ್ನು ಗುರುತಿಸಿ ಏಷ್ಯಾ ಇಂಟರ್ ನ್ಯಾಷನಲ್ ಕಲ್ಚರ್ ರಿಷರ್ಚ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಅವಾರ್ಡ್ ನೀಡಿ ಗೌರವಿಸಿದೆ.
ಕಾರ್ಯಕ್ರಮದಲ್ಲಿ ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿಯವರಾದ ರಾಜೇಶ್ ಕಾಮತ್ , ಸಂದೀಪ್ , ನೌಕರ ಸಂಘದ ಅಧ್ಯಕ್ಷ ಬಾಲಕೃಷ್ಣ, ಕಾರ್ಯದರ್ಶಿ ಭಾರತಿ ಕೆ. ನೌಕರ ಸಂಘದ ಮಾಜಿ ಅಧ್ಯಕ್ಷ ಬಿ.ಎಂ. ಶರೀಫ್, ಜಿಲ್ಲಾ ನೌಕರ ಸಂಘದ ಕೋಶಾಧಿಕಾರಿ ಮೇಬಲ್ ಕ್ರಾಸ್ತ, ಸಂಘದ ಪದಾಧಿಕಾರಿಯವರು, ಕಾರ್ಯದರ್ಶಿಗಳು ಭಾಗವಹಿಸಿದರು.














