25.9 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರಮಟ್ಟದ ಸಿ ಎ ಪರೀಕ್ಷೆ: ಪ್ರಥಮ ಯತ್ನದಲ್ಲೇ ಮಿಂಚಿದ ಎಕ್ಸೆಲ್ ನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು

ಬೆಳ್ತಂಗಡಿ: ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಭಾರತದ ಅತ್ಯಂತ ಕಠಿಣ ಪರೀಕ್ಷೆಯೆನಿಸಿಕೊಂಡ ರಾಷ್ಟ್ರ ಮಟ್ಟದ ಸಿ ಎ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಶ್ರೀವತ್ಸ ಯು , ಸಮ್ಮೇದ್ ಬಾಹುಬಲಿ ಬಾಬಗೊಂಡ್, ಯಾನ ಪೊನ್ನಮ್ಮ ಇವರು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳಾಗಿದ್ದು, ತಮ್ಮ ಪ್ರಥಮ ಯತ್ನದಲ್ಲೇ ಸಿ ಎ ಇಂಟರ್ ಮೀಡಿಯೇಟ್ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ ರಾಷ್ಟ್ರ ಮಟ್ಟದಲ್ಲಿ ಕೇವಲ 20 ಶೇಕಡಾ ವಿದ್ಯಾರ್ಥಿಗಳು ಮಾತ್ರ ಆಯ್ಕೆಯಾದ ಈ ಪರೀಕ್ಷೆಯಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಅತ್ಯಂತ ಅಭಿಮಾನದ ವಿಷಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಸಾಧಕರನ್ನು ಅಧ್ಯಕ್ಷರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya
error: Content is protected !!