ಬೆಳ್ತಂಗಡಿ: ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಭಾರತದ ಅತ್ಯಂತ ಕಠಿಣ ಪರೀಕ್ಷೆಯೆನಿಸಿಕೊಂಡ ರಾಷ್ಟ್ರ ಮಟ್ಟದ ಸಿ ಎ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.
ಶ್ರೀವತ್ಸ ಯು , ಸಮ್ಮೇದ್ ಬಾಹುಬಲಿ ಬಾಬಗೊಂಡ್, ಯಾನ ಪೊನ್ನಮ್ಮ ಇವರು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳಾಗಿದ್ದು, ತಮ್ಮ ಪ್ರಥಮ ಯತ್ನದಲ್ಲೇ ಸಿ ಎ ಇಂಟರ್ ಮೀಡಿಯೇಟ್ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ ರಾಷ್ಟ್ರ ಮಟ್ಟದಲ್ಲಿ ಕೇವಲ 20 ಶೇಕಡಾ ವಿದ್ಯಾರ್ಥಿಗಳು ಮಾತ್ರ ಆಯ್ಕೆಯಾದ ಈ ಪರೀಕ್ಷೆಯಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಅತ್ಯಂತ ಅಭಿಮಾನದ ವಿಷಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಸಾಧಕರನ್ನು ಅಧ್ಯಕ್ಷರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.














