July 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ, ಕಸ-ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾ. ಪಂ. ಕಾರ್ಯಕ್ಕೆ ಮೆಚ್ಚುಗೆ

ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನದಿ ಸೇರಿದಂತೆ ಹಳ್ಳ , ತೋಡುಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಲಾಯಿಲ ಗ್ರಾಮದ ಪಡ್ಲಾಡಿ ಸಮೀಪ ಹರಿಯುತ್ತಿರುವ ಸೋಮವತಿ ಉಪನದಿಯಲ್ಲಿ ಇರುವ ಕಿಂಡಿ ಅಣೆಕಟ್ಟಿನಲ್ಲಿ ಮರ ಕಸ ಕಡ್ಡಿಗಳು ಸಿಲುಕಿ ನೀರು ಸರಾಗವಾಗಿ ಹರಿಯಲು ಸಮಸ್ಯೆಯಾಗಿ ಪಕ್ಕದ ಕೃಷಿ ಪ್ರದೇಶಗಳಿಗೆ ನೀರು ನುಗ್ಗುವ ಸಂಭವ ಇದ್ದು ಈ ಬಗ್ಗೆ ಸ್ಥಳೀಯರು ಮಾಜಿ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಗಮನಕ್ಕೆ ತಂದಾಗ ಅವರು ಲಾಯಿಲ ಗ್ರಾಮ ಪಂಚಾಯತ್ ಗೆ ಈ ಬಗ್ಗೆ ಮಾಹಿತಿ ನೀಡಿ ತಕ್ಷಣ ತೆರವುಗೊಳಿಸುವ ಬಗ್ಗೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದು,

ಈ ಬಗ್ಗೆ ಪಂಚಾಯತ್ ಅಧಿಕಾರಿಗಳು ಸ್ಪಂದಿಸಿ ಪಂಚಾಯತ್ ವತಿಯಿಂದ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಮರ ಸೇರಿದಂತೆ ಇನ್ನಿತರ ಕಸ ಕಡ್ಡಿಗಳನ್ಬು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿದ್ದಾರೆ. ಮನವಿಗೆ ಸ್ಪಂದಿಸಿದ ಪ್ರಸಾದ್ ಶೆಟ್ಟಿ ಹಾಗೂ ಪಂಚಾಯತ್ ಅಧಿಕಾರಿಗಳ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ ಯುವವಾಹಿನಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ.

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya
error: Content is protected !!