ಸುಲ್ಕೇರಿ: 1982 ರಿಂದ ಇಂದಿನವರೆಗೂ ನಾವರದ ದೇರಂಡೋಡಿ, ರಾಜಪಾದೆ ಮತ್ತು ದೇವರಗುಡ್ಡೆಯ ರಸ್ತೆಯು ಯಾವುದೇ ಅಭಿವೃದ್ಧಿ ಕಾಣದೆ ಅದೇ ದುಸ್ಥಿತಿಯಲ್ಲಿದೆ. ಮಳೆ ಬಂದರೆ ರಸ್ತೆ ಸಂಪೂರ್ಣ ಕೆಸರುಮಯವಾಗಿ ವಾಹನ ಸಂಚಾರಕ್ಕೂ, ಶಾಲಾ ಮಕ್ಕಳಿಗೂ, ಹಿರಿಯ ನಾಗರಿಕರಿಗೂ ತೀವ್ರ ತೊಂದರೆಯಾಗುತ್ತದೆ.
ಕಳೆದ ವಿಧಾನಸಭಾ ಚುನಾವಣೆಯ ವೇಳೆ ಈ ರಸ್ತೆಯನ್ನು ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಲು ರೂ.30 ಲಕ್ಷ ಅನುದಾನ ಘೋಷಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಇಂದಿಗೂ ಕಾಮಗಾರಿ ಆರಂಭವಾಗಿಲ್ಲ. ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣ ಗಮನಹರಿಸಿ. ಸುಲ್ಕೇರಿಮೊಗ್ರು ಗ್ರಾಮ ಮತ್ತು ನಾವರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾದ ಕಲ್ಪಿಲದಿಂದ – ದೇವರಗುಡ್ಡೆಯವರೆಗಿನ ರಸ್ತೆಯನ್ನು ಶೀಘ್ರದಲ್ಲೇ ಕಾಂಕ್ರೀಟ್ ರಸ್ತೆಯಾಗಿ ನಿರ್ಮಿಸಿ ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.














