23.6 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರವನ್ನು ಕಡಿಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದೆ.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನೆರಿಯಕಾಡು ಎಂಬಲ್ಲಿ ಸರಕಾರಿ ಜಾಗದಲ್ಲಿ ನೆರಿಯ ಗ್ರಾಮದ ಅಂಬ್ಲೆ ನಿವಾಸಿ ಕೃಷ್ಣಪ್ಪ ಗೌಡರ ಮಗ ರಾಜಪ್ಪ ಗೌಡ(57) ಎಂಬವರು ಅಕ್ರಮವಾಗಿ ಯಾವುದೇ ಅನುಮತಿ ಇಲ್ಲದೆ ಹೆಬ್ಬಲಸು ಮರವನ್ನು ಕಡಿಯುತ್ತಿರುವ ಬಗ್ಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಒ ತ್ಯಾಗರಾಜ್ ಗೆ ಬಂದ ಖಚಿತ ಮಾಹಿತಿ ಮೇರೆಗೆ ಜೂ.29 ರಂದು ದಾಳಿ ಮಾಡಿದ್ದಾರೆ.

ಸರಕಾರಿ ಜಾಗಕ್ಕೆ ದಾಳಿ ಮಾಡಿದ ವೇಳೆ ಒಂದು ಹೆಬ್ಬಲಸು ಮರವನ್ನು ಕಡಿದು ತುಂಡರಿಸಿರುವುದು ಪತ್ತೆಯಾಗಿದೆ. 40 ಹೆಬ್ಬಲಸು ಹಲಗೆ ಮರದ ಗಾತ್ರದ ಒಟ್ಟು ಪ್ರಮಾಣ 1.003 ಘನ ಮೀಟರ್ ಹಾಗೂ 3 ಮರದ ದಿಮ್ಮಿಗಳ ಒಟ್ಟು ಪ್ರಮಾಣ 1.026 ಘನ ಮೀಟರ್ ಆಗಿದೆ.ಕಡಿದಿರುವ ಮರಗಳನ್ನು ಮಹಜರು ನಡೆಸಿ ವಶಪಡಿಸಿಕೊಂಡು ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಜೂ.30 ರಂದು ವರದಿ ಮಾಡಿಕೊಂಡು ಬೆಳ್ತಂಗಡಿ ನ್ಯಾಯಾಲಯಕ್ಕೆ ಜು.1 ರಂದು ಪ್ರಕರಣ ದಾಖಲಿಸಲು ವರದಿಯನ್ನು ಸಲ್ಲಿಸಿ ಜು.2 ರಂದು ಅನುಮತಿ ಸಿಕ್ಕಿದ ಬಳಿಕ ಸಂಜೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ನೆರಿಯ ಗ್ರಾಮದ ಅಂಬ್ಲೆ ನಿವಾಸಿ ಆರೋಪಿ ರಾಜಪ್ಪ ಗೌಡ(57) ವಿರುದ್ಧ THE KARNATAKA FOREST ACT, 1963 8 Sections 33(2) of the THE KARNATAKA FOREST ACT, 1963 THE KARNATAKA FOREST RULES, 1969, 25(3)d ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ನೇತೃತ್ವದಲ್ಲಿ ನೆರಿಯ ಡಿ.ಆರ್.ಎಫ್.ಒ ರವಿಚಂದ್ರ, ಗಸ್ತು ವನಪಾಲಕ ರವಿ ಜಟ್ಟಿ ಮುಕ್ರಿ , ಚಿಬಿದ್ರೆ ಡಿ.ಆರ್.ಎಫ್.ಒ ದೀಪಾ ಗಡಿಗ, ಚಾಲಕ ಕುಶಾಲಪ್ಪ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya
error: Content is protected !!