July 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮ

ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಭಜನಾ ಕಾರ್ಯಕ್ರಮವನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ. ಎನ್. ಜನಾರ್ದನ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ದಿನನಿತ್ಯದ ಒತ್ತಡ, ಆತಂಕಗಳನ್ನು ದೂರ ಮಾಡಿ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಭಜನೆ ನಡೆಯುವ ಸ್ಥಳದಲ್ಲಿ ಧನಾತ್ಮಕ ಕಂಪನಗಳು ಸೃಷ್ಟಿಯಾಗುತ್ತವೆ. ದೇವರ ನಾಮದ ಕಡೆಗೆ ಗಮನ ಹರಿಸುವುದರಿಂದ ಮೆದುಳಿನ ಏಕಾಗ್ರತೆ ಮತ್ತು ಸ್ಮರಣಶಕ್ತಿ ಉತ್ತಮಗೊಳ್ಳುತ್ತದೆ ಎಂದರು. ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಮಾತನಾಡಿ ಸಮೂಹ ಭಜನೆಗಳಲ್ಲಿ ಜಾತಿ, ಮತ ಭೇದವಿಲ್ಲದೆ ಎಲ್ಲರೂ ಒಟ್ಟಾಗಿ ಹಾಡುವುದರಿಂದ ಸಮಾಜದಲ್ಲಿ ಸೌಹಾರ್ದತೆ ಬೆಳೆಯುತ್ತದೆ. ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ, ಭಾಷೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಪರಿಚಯಿಸಲು ಭಜನೆ ಸರಳ ಮಾರ್ಗವಾಗಿದೆ.ನಿರಂತರ ಭಜನೆ ನಡೆಯಲಿ ಎಂದರು.

ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ಸಿರಿ ಸಂಸ್ಥೆಯ ನಿರ್ದೆಶಕರಾದ ಪ್ರಸನ್ನ ಯು, ತಾಲೂಕು ಪರಿಷತ್ ಅಧ್ಯಕ್ಷರಾದ ರವಿರಾಜ್ ಚಾರ್ಮಾಡಿ, ಚಂದ್ರಶೇಖರ ಗೌಡ ಕಾರ್ಯದರ್ಶಿ ಭಜನಾ ಪರಿಷತ್ ಬೆಳ್ತಂಗಡಿ, ಗಣೇಶ್ ಕಣ್ಣಾಜೆ ಕೋಶಾಧಿಕಾರಿ,ಭಜನಾ ಸಂಚಾಲಕಿ ಪದ್ಮಾವತಿ ಹಾಗೂ ಸಿರಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಜೀವನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Suddi Udaya
error: Content is protected !!